ಗುರುವಾರ , ಮಾರ್ಚ್ 30, 2023
24 °C

ಭಟ್ಕಳ ಹೈಟೆಕ್ ಬಸ್ ನಿಲ್ದಾಣದ ಮುಂದೆ ಕೆಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಟ್ಕಳ: ಮಳೆ ಬಂತೆಂದರೆ, ಇಲ್ಲಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೈಟೆಕ್ ಬಸ್ ನಿಲ್ದಾಣದ ಮುಂಭಾಗ ಕೆಸರು ಗದ್ದೆಯಾಗಿ ಮಾರ್ಪಡುತ್ತಿದೆ. ಆದರೂ ಇದನ್ನು ಸರಿಪಡಿಸಲು ಸಂಸ್ಥೆ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸ್ ನಿಲ್ದಾಣದ ಮುಂಭಾಗದಲ್ಲಿ ಕೆಸರು ನೀರು ನಿಂತಿದ್ದು, ಪ್ರಯಾಣಿಕರನ್ನು ಅದನ್ನು ದಾಟಿಕೊಂಡೇ ಹೋಗಬೇಕಾಗಿದೆ. ಅಷ್ಟರಲ್ಲಿ ಯಾವುದಾದರೂ ವಾಹನ ಬಂದರೆ ಮೈ ತುಂಬಾ ಕೆಸರು ಸಿಡಿಯುತ್ತದೆ. ₹ 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ಲಾಟ್‌ಫಾರಂ ನಿರ್ಮಾಣ ಮಾಡಿಲ್ಲ. ಬೇಸಿಗೆಯಲ್ಲಿ ಮೇಲೇಳುವ ದೂಳಿನ ನಡುವೆ ಪ್ರಯಾಣಿಕರು ಸಾಗಿದರೆ, ಮಳೆಗಾಲದಲ್ಲಿ ಕೆಸರಿನಲ್ಲಿ ಸಂಚರಿಸಬೇಕಾಗಿದೆ.

ಈ ಬಸ್ ನಿಲ್ದಾಣಕ್ಕೆ ನಿತ್ಯವೂ ಸಾವಿರಾರು ಪ್ರಯಾಣಿಕರು ಬರುತ್ತಾರೆ. ಬಸ್ ನಿಲ್ದಾಣದಲ್ಲಿ ಮಳಿಗೆಗಳಿದ್ದು, ವ್ಯಾಪಾರ ವಹಿವಾಟು ಸದಾ ನಡೆಯುತ್ತಿರುತ್ತದೆ. ಆದರೆ, ಕೆಸರು ನೀರು ನಿಂತಿರುವುದರಿಂದ ಯಾರೂ ನಿಲ್ದಾಣದ ಒಳಗೆ ಹೋಗಲು ಮನಸ್ಸು ಮಾಡುತ್ತಿಲ್ಲ. ಒಂದುವೇಳೆ ಹೋದರೂ ಹಿಡಿಶಾಪ ಹಾಕುತ್ತಾ ತೆರಳುತ್ತಾರೆ.

‘ಬಸ್ ನಿಲ್ದಾಣದ ಎದುರು ಕೆಸರು ನೀರು ನಿಂತರೂ ಅದನ್ನು ಸರಿ ಪಡಿಸಲು ಸಂಸ್ಥೆ ಕ್ರಮ ಕೈಗೊಂಡಿಲ್ಲ. ನಿತ್ಯವೂ ಈ ಕೆಸರನ್ನು ದಾಟಿ ನಾವು ಪ್ರಯಾಣಿಸಬೇಕು. ನಮ್ಮಿಂದ ಟಿಕೆಟ್ ದರ ಪಡೆಯುವ ಸಂಸ್ಥೆಯು, ನಿಲ್ದಾಣದಲ್ಲಿ ಮೂಲ ಸೌಕರ್ಯ ಸರಿಪಡಿಸುವತ್ತ ಕೂಡ ಗಮನ ಹರಿಸಬೇಕು’ ಎನ್ನುತ್ತಾರೆ ಬ್ಯಾಂಕ್ ಉದ್ಯೋಗಿ ಕುಮಟಾದ ರಾಘವೇಂದ್ರ ನಾಯ್ಕ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು