ಬಸ್ ನಿಲ್ದಾಣದ ಮುಂಭಾಗದಲ್ಲಿ ಕೆಸರು ನೀರು ನಿಂತಿದ್ದು, ಪ್ರಯಾಣಿಕರನ್ನು ಅದನ್ನು ದಾಟಿಕೊಂಡೇ ಹೋಗಬೇಕಾಗಿದೆ. ಅಷ್ಟರಲ್ಲಿ ಯಾವುದಾದರೂ ವಾಹನ ಬಂದರೆ ಮೈ ತುಂಬಾ ಕೆಸರು ಸಿಡಿಯುತ್ತದೆ. ₹ 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ಲಾಟ್ಫಾರಂ ನಿರ್ಮಾಣ ಮಾಡಿಲ್ಲ. ಬೇಸಿಗೆಯಲ್ಲಿ ಮೇಲೇಳುವ ದೂಳಿನ ನಡುವೆ ಪ್ರಯಾಣಿಕರು ಸಾಗಿದರೆ, ಮಳೆಗಾಲದಲ್ಲಿ ಕೆಸರಿನಲ್ಲಿ ಸಂಚರಿಸಬೇಕಾಗಿದೆ.