<p><strong>ಭಟ್ಕಳ:</strong> ಮಳೆ ಬಂತೆಂದರೆ, ಇಲ್ಲಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೈಟೆಕ್ ಬಸ್ ನಿಲ್ದಾಣದ ಮುಂಭಾಗ ಕೆಸರು ಗದ್ದೆಯಾಗಿ ಮಾರ್ಪಡುತ್ತಿದೆ. ಆದರೂ ಇದನ್ನು ಸರಿಪಡಿಸಲು ಸಂಸ್ಥೆ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಬಸ್ ನಿಲ್ದಾಣದ ಮುಂಭಾಗದಲ್ಲಿ ಕೆಸರು ನೀರು ನಿಂತಿದ್ದು, ಪ್ರಯಾಣಿಕರನ್ನು ಅದನ್ನು ದಾಟಿಕೊಂಡೇ ಹೋಗಬೇಕಾಗಿದೆ. ಅಷ್ಟರಲ್ಲಿ ಯಾವುದಾದರೂ ವಾಹನ ಬಂದರೆ ಮೈ ತುಂಬಾ ಕೆಸರು ಸಿಡಿಯುತ್ತದೆ. ₹ 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ಲಾಟ್ಫಾರಂ ನಿರ್ಮಾಣ ಮಾಡಿಲ್ಲ. ಬೇಸಿಗೆಯಲ್ಲಿ ಮೇಲೇಳುವ ದೂಳಿನ ನಡುವೆ ಪ್ರಯಾಣಿಕರು ಸಾಗಿದರೆ, ಮಳೆಗಾಲದಲ್ಲಿ ಕೆಸರಿನಲ್ಲಿ ಸಂಚರಿಸಬೇಕಾಗಿದೆ.</p>.<p>ಈ ಬಸ್ ನಿಲ್ದಾಣಕ್ಕೆ ನಿತ್ಯವೂ ಸಾವಿರಾರು ಪ್ರಯಾಣಿಕರು ಬರುತ್ತಾರೆ. ಬಸ್ ನಿಲ್ದಾಣದಲ್ಲಿ ಮಳಿಗೆಗಳಿದ್ದು, ವ್ಯಾಪಾರ ವಹಿವಾಟು ಸದಾ ನಡೆಯುತ್ತಿರುತ್ತದೆ. ಆದರೆ, ಕೆಸರು ನೀರು ನಿಂತಿರುವುದರಿಂದ ಯಾರೂ ನಿಲ್ದಾಣದ ಒಳಗೆ ಹೋಗಲು ಮನಸ್ಸು ಮಾಡುತ್ತಿಲ್ಲ. ಒಂದುವೇಳೆ ಹೋದರೂ ಹಿಡಿಶಾಪ ಹಾಕುತ್ತಾ ತೆರಳುತ್ತಾರೆ.</p>.<p>‘ಬಸ್ ನಿಲ್ದಾಣದ ಎದುರು ಕೆಸರು ನೀರು ನಿಂತರೂ ಅದನ್ನು ಸರಿ ಪಡಿಸಲು ಸಂಸ್ಥೆ ಕ್ರಮ ಕೈಗೊಂಡಿಲ್ಲ. ನಿತ್ಯವೂ ಈ ಕೆಸರನ್ನು ದಾಟಿ ನಾವು ಪ್ರಯಾಣಿಸಬೇಕು. ನಮ್ಮಿಂದ ಟಿಕೆಟ್ ದರ ಪಡೆಯುವ ಸಂಸ್ಥೆಯು, ನಿಲ್ದಾಣದಲ್ಲಿ ಮೂಲ ಸೌಕರ್ಯ ಸರಿಪಡಿಸುವತ್ತ ಕೂಡ ಗಮನ ಹರಿಸಬೇಕು’ ಎನ್ನುತ್ತಾರೆ ಬ್ಯಾಂಕ್ ಉದ್ಯೋಗಿಕುಮಟಾದ ರಾಘವೇಂದ್ರ ನಾಯ್ಕ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ:</strong> ಮಳೆ ಬಂತೆಂದರೆ, ಇಲ್ಲಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೈಟೆಕ್ ಬಸ್ ನಿಲ್ದಾಣದ ಮುಂಭಾಗ ಕೆಸರು ಗದ್ದೆಯಾಗಿ ಮಾರ್ಪಡುತ್ತಿದೆ. ಆದರೂ ಇದನ್ನು ಸರಿಪಡಿಸಲು ಸಂಸ್ಥೆ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಬಸ್ ನಿಲ್ದಾಣದ ಮುಂಭಾಗದಲ್ಲಿ ಕೆಸರು ನೀರು ನಿಂತಿದ್ದು, ಪ್ರಯಾಣಿಕರನ್ನು ಅದನ್ನು ದಾಟಿಕೊಂಡೇ ಹೋಗಬೇಕಾಗಿದೆ. ಅಷ್ಟರಲ್ಲಿ ಯಾವುದಾದರೂ ವಾಹನ ಬಂದರೆ ಮೈ ತುಂಬಾ ಕೆಸರು ಸಿಡಿಯುತ್ತದೆ. ₹ 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ಲಾಟ್ಫಾರಂ ನಿರ್ಮಾಣ ಮಾಡಿಲ್ಲ. ಬೇಸಿಗೆಯಲ್ಲಿ ಮೇಲೇಳುವ ದೂಳಿನ ನಡುವೆ ಪ್ರಯಾಣಿಕರು ಸಾಗಿದರೆ, ಮಳೆಗಾಲದಲ್ಲಿ ಕೆಸರಿನಲ್ಲಿ ಸಂಚರಿಸಬೇಕಾಗಿದೆ.</p>.<p>ಈ ಬಸ್ ನಿಲ್ದಾಣಕ್ಕೆ ನಿತ್ಯವೂ ಸಾವಿರಾರು ಪ್ರಯಾಣಿಕರು ಬರುತ್ತಾರೆ. ಬಸ್ ನಿಲ್ದಾಣದಲ್ಲಿ ಮಳಿಗೆಗಳಿದ್ದು, ವ್ಯಾಪಾರ ವಹಿವಾಟು ಸದಾ ನಡೆಯುತ್ತಿರುತ್ತದೆ. ಆದರೆ, ಕೆಸರು ನೀರು ನಿಂತಿರುವುದರಿಂದ ಯಾರೂ ನಿಲ್ದಾಣದ ಒಳಗೆ ಹೋಗಲು ಮನಸ್ಸು ಮಾಡುತ್ತಿಲ್ಲ. ಒಂದುವೇಳೆ ಹೋದರೂ ಹಿಡಿಶಾಪ ಹಾಕುತ್ತಾ ತೆರಳುತ್ತಾರೆ.</p>.<p>‘ಬಸ್ ನಿಲ್ದಾಣದ ಎದುರು ಕೆಸರು ನೀರು ನಿಂತರೂ ಅದನ್ನು ಸರಿ ಪಡಿಸಲು ಸಂಸ್ಥೆ ಕ್ರಮ ಕೈಗೊಂಡಿಲ್ಲ. ನಿತ್ಯವೂ ಈ ಕೆಸರನ್ನು ದಾಟಿ ನಾವು ಪ್ರಯಾಣಿಸಬೇಕು. ನಮ್ಮಿಂದ ಟಿಕೆಟ್ ದರ ಪಡೆಯುವ ಸಂಸ್ಥೆಯು, ನಿಲ್ದಾಣದಲ್ಲಿ ಮೂಲ ಸೌಕರ್ಯ ಸರಿಪಡಿಸುವತ್ತ ಕೂಡ ಗಮನ ಹರಿಸಬೇಕು’ ಎನ್ನುತ್ತಾರೆ ಬ್ಯಾಂಕ್ ಉದ್ಯೋಗಿಕುಮಟಾದ ರಾಘವೇಂದ್ರ ನಾಯ್ಕ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>