ಬಿ.ಜೆ.ಪಿ. ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಪ್ರಸಾದ ಹೆಗಡೆ ದೂರು ನೀಡಿದವರು. ಪಂಜಾಬ್ ಅನ್ನು ಖಲಿಸ್ತಾನ ಎಂಬ ಹೆಸರಿನಲ್ಲಿ ಭಾರತದಿಂದ ಬೇರ್ಪಡಿಸುವ ಸಂಚನ್ನು ರೂಪಿಸಿದ್ದ ಎಸ್.ಎಫ್.ಜೆ.ಯನ್ನು 2019ರಲ್ಲಿ ಕೇಂದ್ರ ಸರ್ಕಾರ ನಿಷೇಧಿಸಿತ್ತು. ಗುರುಪತ್ವ ಸಿಂಗ್ಅದರ ಮುಖ್ಯಸ್ಥನಾಗಿದ್ದಾರೆ. ಕೇಂದ್ರ ಸರ್ಕಾರ ನಿಷೇಧಿಸಿದ್ದರೂ ಸಂಘಟನೆಯ ಟ್ವಿಟರ್ ಖಾತೆ ಸಕ್ರಿಯವಾಗಿದೆ. ಅದರಲ್ಲಿ ಭಾರತ ವಿರೋಧಿ ಸಂಗತಿಗಳನ್ನು, ಭಯೋತ್ಪಾದಕ ಚಟುವಟಿಕೆಗಳನ್ನು ಪ್ರಚೋದಿಸುವಂತಹ ಟ್ವೀಟ್ಗಳನ್ನು ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ.