ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಇಲ್ಲಿನ ಪುರಸಭೆ ಕಾರ್ಯಾಲಯದ ಮುಂಭಾಗದಲ್ಲಿರುವ ಶಿವಾಜಿ ವೃತ್ತದ ಬಳಿ ಅಳವಡಿಸಿದ ಲಾಂಛನದಲ್ಲಿ (ಲೋಗೊ) ಮೊಗಲರ ಸಂಸ್ಕೃತಿಯನ್ನು ಬಿಂಬಿಸುವ ಸ್ಮಾರಕಗಳನ್ನು ಬಳಸಲಾಗಿದೆ. ಇದನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಬಿ.ಜೆ.ಪಿ ಹಾಗೂ ಕೆಲವು ಸಂಘಟನೆಗಳ ಮುಖಂಡರು ಭಾನುವಾರ ತಡರಾತ್ರಿಯವರೆಗೂ ಪ್ರತಿಭಟನೆ, ಧರಣಿ ನಡೆಸಿದ್ದರು.