ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ನೇತೃತ್ವದಲ್ಲಿ, ಕಾರ್ಯಕರ್ತರು ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ ಅವರಿಗೆ ದೂರು ನೀಡಿದರು. ಹತ್ತು ದಿನಗಳಿಂದ ಶಾಸಕರು ಕಾಣೆಯಾಗಿದ್ದು, ಶಾಸಕರು ಸಂಪರ್ಕಕ್ಕೂ ಸಿಕ್ಕಿಲ್ಲ. ಕ್ಷೇತ್ರದ ಜನರು ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾಗಿದ್ದಾರೆ. ಶಾಸಕರನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅಪಹರಣ ಮಾಡಿ, ಅಕ್ರಮ ಹಾಗೂ ಬಲವಂತವಾಗಿ ಕೂಡಿ ಹಾಕಿರಬಹುದೆಂಬ ಸಂಶಯ ಬಲವಾಗಿದೆ. ಶಾಸಕರ ಉಪಸ್ಥಿತಿ ಕ್ಷೇತ್ರಕ್ಕೆ ತೀರಾ ಅಗತ್ಯವಾಗಿರುವ ಕಾರಣ, ದೂರು ಸ್ವೀಕರಿಸಿದ ತಕ್ಷಣವೇ ಕಾರ್ಯಪ್ರವೃತ್ತರಾಗಿ ಶಿವರಾಮ ಹೆಬ್ಬಾರರನ್ನು ಹುಡುಕಿಕೊಡಬೇಕು ಎಂದು ಮನವಿ ಮಾಡಿದ್ದಾರೆ.