<p><strong>ಶಿರಸಿ:</strong> ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ಅತೃಪ್ತರೊಂದಿಗೆ ಇದ್ದಾರೆ. ಇತ್ತ ಇಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಮುಖರು ಬುಧವಾರ ಇಲ್ಲಿನ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿ, ಶಾಸಕರನ್ನು ಹುಡುಕಿಕೊಡುವಂತೆ ದೂರ ದಾಖಲಿಸಿದ್ದಾರೆ.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ನೇತೃತ್ವದಲ್ಲಿ, ಕಾರ್ಯಕರ್ತರು ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ ಅವರಿಗೆ ದೂರು ನೀಡಿದರು. ಹತ್ತು ದಿನಗಳಿಂದ ಶಾಸಕರು ಕಾಣೆಯಾಗಿದ್ದು, ಶಾಸಕರು ಸಂಪರ್ಕಕ್ಕೂ ಸಿಕ್ಕಿಲ್ಲ. ಕ್ಷೇತ್ರದ ಜನರು ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾಗಿದ್ದಾರೆ. ಶಾಸಕರನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅಪಹರಣ ಮಾಡಿ, ಅಕ್ರಮ ಹಾಗೂ ಬಲವಂತವಾಗಿ ಕೂಡಿ ಹಾಕಿರಬಹುದೆಂಬ ಸಂಶಯ ಬಲವಾಗಿದೆ. ಶಾಸಕರ ಉಪಸ್ಥಿತಿ ಕ್ಷೇತ್ರಕ್ಕೆ ತೀರಾ ಅಗತ್ಯವಾಗಿರುವ ಕಾರಣ, ದೂರು ಸ್ವೀಕರಿಸಿದ ತಕ್ಷಣವೇ ಕಾರ್ಯಪ್ರವೃತ್ತರಾಗಿ ಶಿವರಾಮ ಹೆಬ್ಬಾರರನ್ನು ಹುಡುಕಿಕೊಡಬೇಕು ಎಂದು ಮನವಿ ಮಾಡಿದ್ದಾರೆ.</p>.<p>ಭೀಮಣ್ಣ ನಾಯ್ಕ ಮಾತನಾಡಿ, ‘ರೈತರು, ಸಾರ್ವಜನಿಕರು ಸೇರಿದಂತೆ ಅನೇಕರು ಶಾಸಕರ ಕುರಿತಾಗಿ ಕೇಳಿಕೊಂಡು ಬರುತ್ತಿದ್ದಾರೆ. ಕಳೆದ ನಾಲ್ಕು ದಿನಗಳ ಮೊದಲು ಶಾಸಕರ ಮನೆಗೆ ತೆರಳಿದಾಗ ಅವರು ಇಲ್ಲದ ಕಾರಣ ಅವರನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದೇವೆ’ ಎಂದರು.</p>.<p>ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಎನ್.ಹೆಗಡೆ ಮುರೇಗಾರ, ಪ್ರಮುಖರಾದ ಎಸ್.ಕೆ.ಭಾಗವತ, ರಮೇಶ ದುಬಾಶಿ, ದೀಪಕ ದೊಡ್ಡೂರು, ಎಂ.ಎನ್.ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ಅತೃಪ್ತರೊಂದಿಗೆ ಇದ್ದಾರೆ. ಇತ್ತ ಇಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಮುಖರು ಬುಧವಾರ ಇಲ್ಲಿನ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿ, ಶಾಸಕರನ್ನು ಹುಡುಕಿಕೊಡುವಂತೆ ದೂರ ದಾಖಲಿಸಿದ್ದಾರೆ.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ನೇತೃತ್ವದಲ್ಲಿ, ಕಾರ್ಯಕರ್ತರು ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ ಅವರಿಗೆ ದೂರು ನೀಡಿದರು. ಹತ್ತು ದಿನಗಳಿಂದ ಶಾಸಕರು ಕಾಣೆಯಾಗಿದ್ದು, ಶಾಸಕರು ಸಂಪರ್ಕಕ್ಕೂ ಸಿಕ್ಕಿಲ್ಲ. ಕ್ಷೇತ್ರದ ಜನರು ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾಗಿದ್ದಾರೆ. ಶಾಸಕರನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅಪಹರಣ ಮಾಡಿ, ಅಕ್ರಮ ಹಾಗೂ ಬಲವಂತವಾಗಿ ಕೂಡಿ ಹಾಕಿರಬಹುದೆಂಬ ಸಂಶಯ ಬಲವಾಗಿದೆ. ಶಾಸಕರ ಉಪಸ್ಥಿತಿ ಕ್ಷೇತ್ರಕ್ಕೆ ತೀರಾ ಅಗತ್ಯವಾಗಿರುವ ಕಾರಣ, ದೂರು ಸ್ವೀಕರಿಸಿದ ತಕ್ಷಣವೇ ಕಾರ್ಯಪ್ರವೃತ್ತರಾಗಿ ಶಿವರಾಮ ಹೆಬ್ಬಾರರನ್ನು ಹುಡುಕಿಕೊಡಬೇಕು ಎಂದು ಮನವಿ ಮಾಡಿದ್ದಾರೆ.</p>.<p>ಭೀಮಣ್ಣ ನಾಯ್ಕ ಮಾತನಾಡಿ, ‘ರೈತರು, ಸಾರ್ವಜನಿಕರು ಸೇರಿದಂತೆ ಅನೇಕರು ಶಾಸಕರ ಕುರಿತಾಗಿ ಕೇಳಿಕೊಂಡು ಬರುತ್ತಿದ್ದಾರೆ. ಕಳೆದ ನಾಲ್ಕು ದಿನಗಳ ಮೊದಲು ಶಾಸಕರ ಮನೆಗೆ ತೆರಳಿದಾಗ ಅವರು ಇಲ್ಲದ ಕಾರಣ ಅವರನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದೇವೆ’ ಎಂದರು.</p>.<p>ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಎನ್.ಹೆಗಡೆ ಮುರೇಗಾರ, ಪ್ರಮುಖರಾದ ಎಸ್.ಕೆ.ಭಾಗವತ, ರಮೇಶ ದುಬಾಶಿ, ದೀಪಕ ದೊಡ್ಡೂರು, ಎಂ.ಎನ್.ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>