ಇಲ್ಲಿ ಶನಿವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಜಿಲ್ಲೆಯಲ್ಲಿ ಕಾಂಗ್ರೆಸ್ ನ ಎರಡು ಬಣಗಳಿವೆ. ಒಂದು ಬಣ ಪಕ್ಷದ ಸಂಘಟನೆ, ಗೆಲುವಿಗೆ ಹಗಲು ರಾತ್ರಿ ದುಡಿಯುತ್ತದೆ. ಎರಡನೇ ಬಣ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸುವ ಕೆಲಸ ಮಾಡುತ್ತದೆ. ರಾಜಕೀಯವಾಗಿ ಬೆಳೆಯಲು ಈ ಬಣ ಯಾರಿಗೂ ಅವಕಾಶ ನೀಡುತ್ತಿಲ್ಲ' ಎಂದು ದೂರಿದರು.