ಕಾಂಗ್ರೆಸ್ ಪ್ರಮುಖ ರಮೇಶ ದುಬಾಶಿ ಮಾತನಾಡಿ, ‘ಬಿಜೆಪಿ ಕಾರ್ಯಕರ್ತರು ಮರಾಠಿಕೊಪ್ಪದಲ್ಲಿ ಕಾರ್ಡ್ ವಿತರಿಸುವಾಗ ಸಿಕ್ಕಿ ಬಿದ್ದಿದ್ದರು. ಆ ಸಂದರ್ಭದಲ್ಲಿ ಅಂಚೆ ಇಲಾಖೆ ಅಧಿಕಾರಿಗಳನ್ನು ವಿಚಾರಿಸಿದಾಗ ಅವರು ತಪ್ಪು ಒಪ್ಪಿಕೊಂಡು, ಹೀಗಾಗದಂತೆ ಎಚ್ಚರ ವಹಿಸುವುದಾಗಿ ಹೇಳಿದ್ದರು. ಆದರೆ, ಈ ತಪ್ಪು ಪುನರಾವರ್ತನೆಯಾಗುತ್ತಿದೆ. ಅಂಚೆ ನೌಕರರು ಕೇಂದ್ರ ಸಚಿವರ ಒತ್ತಡಕ್ಕೆ ಮಣಿದು ಬಿಜೆಪಿ ಕಾರ್ಯಕರ್ತರಿಗೆ ಕಾರ್ಡ್ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರದ ಯೋಜನೆ ಇದು ಎಂದು ರಾಜಕೀಯ ಲಾಭ ಮಾಡಿಕೊಳ್ಳುತ್ತಿದ್ದಾರೆ. ಅಂಚೆ ಇಲಾಖೆ ಇದಕ್ಕೆ ಕಡಿವಾಣ ಹಾಕಿ, ನೌಕರರ ಮೂಲಕ ಹಂಚಿಕೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.