<p><strong>ಶಿರಸಿ: </strong>ಸಂಘಟಿತ ವಲಯದಲ್ಲಿ ಗುರುತಿಸಿಕೊಂಡಿರುವ ಫೋಟೊಗ್ರಾಫರ್ಗಳು ಹಾಗೂ ವಿಡಿಯೋ ಗ್ರಾಫರ್ಗಳನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಸೇರಿಸಬೇಕು ಎಂದು ಪೋಟೋಗ್ರಾಪರ್ಸ್ ಮತ್ತು ವಿಡಿಯೋಗ್ರಾಪರ್ಸ್ ಅಸೋಸಿಯೇಶನ್ ಶಿರಸಿ ತಾಲ್ಲೂಕು ಘಟಕದ ಅಧ್ಯಕ್ಷ ರಾಜು ಕಾನಸೂರ ಒತ್ತಾಯಿಸಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ ಎರಡು ವರ್ಷಗಳಿಂದ ಕಾಡಿರುವ ಕೋವಿಡ್ ಬಾಧೆಯಿಂದ ಫೋಟೊಗ್ರಫಿ ಕ್ಷೇತ್ರ ನಲುಗಿದೆ. ಆದಾಯವಿಲ್ಲದ ಪರಿಣಾಮ ಇದೇ ವೃತ್ತಿ ನಂಬಿಕೊಂಡಿರುವ ನೂರಾರು ಕುಟುಂಬಗಳು ಸಂಕಷ್ಟಕ್ಕಿ ಸಿಲುಕಿವೆ’ ಎಂದರು.</p>.<p>‘ಫೋಟೊಗ್ರಾಫರಗಳಿಗೆ ಸರ್ಕಾರದ ಯಾವ ಸೌಲಭ್ಯವೂ ದೊರೆಯುತ್ತಿಲ್ಲ. ಸಣ್ಣ ಆದಾಯ ನಂಬಿ ಬದುಕುವವರಿಗೆ ಆರೋಗ್ಯ, ಶಿಕ್ಷಣವೂ ಸೇರಿದಂತೆ ಇತರ ಕಾರ್ಮಿಕ ವರ್ಗಕ್ಕೆ ಒದಗಿಸುವ ಸವಲತ್ತು ಒದಗಿಸಿಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸಂಘದ ಎಲ್ಲಾ ಸದಸ್ಯರಿಗೂ ಗುರುತಿನ ಚೀಟಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ನಿರ್ದಿಷ್ಟ ದರ ನಿಗದಿಪಡಿಸಲು ತೀರ್ಮಾನಿಸಲಾಗಿದೆ. ಏಕರೂಪದ ದರಪಟ್ಟಿ ಪ್ರಕಟಿಸಲಾಗುವುದು’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸಂತೋಷ ಸಿರ್ಸಿಕರ್, ಪ್ರಮುಖರಾದ ಲಕ್ಷ್ಮೀನಾರಾಯಣ ಭಟ್ಟ, ಜಗದೀಶ ಜೈವಂತ, ನವೀನ್ ಗಾಂವ್ಕರ್, ರವಿ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ಸಂಘಟಿತ ವಲಯದಲ್ಲಿ ಗುರುತಿಸಿಕೊಂಡಿರುವ ಫೋಟೊಗ್ರಾಫರ್ಗಳು ಹಾಗೂ ವಿಡಿಯೋ ಗ್ರಾಫರ್ಗಳನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಸೇರಿಸಬೇಕು ಎಂದು ಪೋಟೋಗ್ರಾಪರ್ಸ್ ಮತ್ತು ವಿಡಿಯೋಗ್ರಾಪರ್ಸ್ ಅಸೋಸಿಯೇಶನ್ ಶಿರಸಿ ತಾಲ್ಲೂಕು ಘಟಕದ ಅಧ್ಯಕ್ಷ ರಾಜು ಕಾನಸೂರ ಒತ್ತಾಯಿಸಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ ಎರಡು ವರ್ಷಗಳಿಂದ ಕಾಡಿರುವ ಕೋವಿಡ್ ಬಾಧೆಯಿಂದ ಫೋಟೊಗ್ರಫಿ ಕ್ಷೇತ್ರ ನಲುಗಿದೆ. ಆದಾಯವಿಲ್ಲದ ಪರಿಣಾಮ ಇದೇ ವೃತ್ತಿ ನಂಬಿಕೊಂಡಿರುವ ನೂರಾರು ಕುಟುಂಬಗಳು ಸಂಕಷ್ಟಕ್ಕಿ ಸಿಲುಕಿವೆ’ ಎಂದರು.</p>.<p>‘ಫೋಟೊಗ್ರಾಫರಗಳಿಗೆ ಸರ್ಕಾರದ ಯಾವ ಸೌಲಭ್ಯವೂ ದೊರೆಯುತ್ತಿಲ್ಲ. ಸಣ್ಣ ಆದಾಯ ನಂಬಿ ಬದುಕುವವರಿಗೆ ಆರೋಗ್ಯ, ಶಿಕ್ಷಣವೂ ಸೇರಿದಂತೆ ಇತರ ಕಾರ್ಮಿಕ ವರ್ಗಕ್ಕೆ ಒದಗಿಸುವ ಸವಲತ್ತು ಒದಗಿಸಿಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸಂಘದ ಎಲ್ಲಾ ಸದಸ್ಯರಿಗೂ ಗುರುತಿನ ಚೀಟಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ನಿರ್ದಿಷ್ಟ ದರ ನಿಗದಿಪಡಿಸಲು ತೀರ್ಮಾನಿಸಲಾಗಿದೆ. ಏಕರೂಪದ ದರಪಟ್ಟಿ ಪ್ರಕಟಿಸಲಾಗುವುದು’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸಂತೋಷ ಸಿರ್ಸಿಕರ್, ಪ್ರಮುಖರಾದ ಲಕ್ಷ್ಮೀನಾರಾಯಣ ಭಟ್ಟ, ಜಗದೀಶ ಜೈವಂತ, ನವೀನ್ ಗಾಂವ್ಕರ್, ರವಿ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>