<p><strong>ಅಂಕೋಲಾ:</strong>ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಇದನ್ನು ಶುಕ್ರವಾರಪರಿಶೀಲಿಸಿದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಸಹಾಯಕ ಕಾರ್ಯನಿರ್ವಾಹಕಎಂಜಿನಿಯರ್ದಿವಾಕರ ಯರಗುಪ್ಪ, ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.</p>.<p>₹ 3.85ಕೋಟಿವೆಚ್ಚದಲ್ಲಿ ನಡೆಯುತ್ತಿರುವ ಬಸ್ನಿಲ್ದಾಣದ ಕಾಮಗಾರಿ ಆರಂಭವಾಗಿ ಒಂದು ವರ್ಷ ಕಳೆಯಿತು. ಆದರೆ,ಅರ್ಧದಷ್ಟೂಕಾಮಗಾರಿಯಾಗಿಲ್ಲ. ಈ ಬಗ್ಗೆ ಸಾರ್ವಜನಿಕರುಹಲವು ಬಾರಿ ಸಂಸ್ಥೆಯ ಹಿರಿಯ ಅಧಿಕಾರಿಗಳಿಗೆ ದೂರಿದ್ದರು.</p>.<p>ಕಾಮಗಾರಿಯನ್ನು ಪರಿಶೀಲಿಸಿದ ದಿವಾಕರ ಯರಗುಪ್ಪ ಮತ್ತುಸಂಸ್ಥೆಯ ಎಂಜಿನಿಯರ್ಕೆ.ಬಿ.ಕುಲಕರ್ಣಿ, ಸ್ಥಳದಲ್ಲಿದ್ದ ಗುತ್ತಿಗೆದಾರರಿಂದ ಮಾಹಿತಿ ಪಡೆದರು. ಗುತ್ತಿಗೆದಾರರಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿ, ‘ಕೆಲಸ ಮಾಡುವುದಾದರೆ ನಿಷ್ಠೆಯಿಂದ ಮಾಡಿ. ಇಲ್ಲದಿದ್ದರೆ ನಿರ್ದಾಕ್ಷಿಣ್ಯವಾಗಿ ನಿಮ್ಮ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು’ ಎಚ್ಚರಿಕೆ ನೀಡಿದರು.</p>.<p>ಇದೇವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಒಂದು ತಿಂಗಳಿನಲ್ಲಿ ಮಳೆಗಾಲ ಆರಂಭವಾಗುತ್ತದೆ. ಜೂನ್ ಅಂತ್ಯದೊಳಗೆ ಎಲ್ಲಾ ಕಾಮಗಾರಿ ಪೂರ್ಣಗೊಳ್ಳಬೇಕಿದೆ. ಮಳೆಗಾಲದಲ್ಲಿ ಪ್ರಯಾಣಿಕರಿಗೆ ಯಾವುದೇತೊಂದರೆ ಆಗದ ರೀತಿಯಲ್ಲಿ ಕಾಮಗಾರಿಕೈಗೊಳ್ಳಲು ಸೂಚಿಸಲಾಗಿದೆ. ಗುತ್ತಿಗೆದಾರರು ಇನ್ನೂ ನಿಧಾನಗತಿಅನುಸರಿಸಿದರೆ ಸೂಕ್ತ ಕ್ರಮ ಜರಗಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ:</strong>ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಇದನ್ನು ಶುಕ್ರವಾರಪರಿಶೀಲಿಸಿದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಸಹಾಯಕ ಕಾರ್ಯನಿರ್ವಾಹಕಎಂಜಿನಿಯರ್ದಿವಾಕರ ಯರಗುಪ್ಪ, ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.</p>.<p>₹ 3.85ಕೋಟಿವೆಚ್ಚದಲ್ಲಿ ನಡೆಯುತ್ತಿರುವ ಬಸ್ನಿಲ್ದಾಣದ ಕಾಮಗಾರಿ ಆರಂಭವಾಗಿ ಒಂದು ವರ್ಷ ಕಳೆಯಿತು. ಆದರೆ,ಅರ್ಧದಷ್ಟೂಕಾಮಗಾರಿಯಾಗಿಲ್ಲ. ಈ ಬಗ್ಗೆ ಸಾರ್ವಜನಿಕರುಹಲವು ಬಾರಿ ಸಂಸ್ಥೆಯ ಹಿರಿಯ ಅಧಿಕಾರಿಗಳಿಗೆ ದೂರಿದ್ದರು.</p>.<p>ಕಾಮಗಾರಿಯನ್ನು ಪರಿಶೀಲಿಸಿದ ದಿವಾಕರ ಯರಗುಪ್ಪ ಮತ್ತುಸಂಸ್ಥೆಯ ಎಂಜಿನಿಯರ್ಕೆ.ಬಿ.ಕುಲಕರ್ಣಿ, ಸ್ಥಳದಲ್ಲಿದ್ದ ಗುತ್ತಿಗೆದಾರರಿಂದ ಮಾಹಿತಿ ಪಡೆದರು. ಗುತ್ತಿಗೆದಾರರಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿ, ‘ಕೆಲಸ ಮಾಡುವುದಾದರೆ ನಿಷ್ಠೆಯಿಂದ ಮಾಡಿ. ಇಲ್ಲದಿದ್ದರೆ ನಿರ್ದಾಕ್ಷಿಣ್ಯವಾಗಿ ನಿಮ್ಮ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು’ ಎಚ್ಚರಿಕೆ ನೀಡಿದರು.</p>.<p>ಇದೇವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಒಂದು ತಿಂಗಳಿನಲ್ಲಿ ಮಳೆಗಾಲ ಆರಂಭವಾಗುತ್ತದೆ. ಜೂನ್ ಅಂತ್ಯದೊಳಗೆ ಎಲ್ಲಾ ಕಾಮಗಾರಿ ಪೂರ್ಣಗೊಳ್ಳಬೇಕಿದೆ. ಮಳೆಗಾಲದಲ್ಲಿ ಪ್ರಯಾಣಿಕರಿಗೆ ಯಾವುದೇತೊಂದರೆ ಆಗದ ರೀತಿಯಲ್ಲಿ ಕಾಮಗಾರಿಕೈಗೊಳ್ಳಲು ಸೂಚಿಸಲಾಗಿದೆ. ಗುತ್ತಿಗೆದಾರರು ಇನ್ನೂ ನಿಧಾನಗತಿಅನುಸರಿಸಿದರೆ ಸೂಕ್ತ ಕ್ರಮ ಜರಗಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>