<p><strong>ಕಾರವಾರ</strong>: ‘ಕೊರೊನಾ 2 ವೈರಸ್ ಹರಡುತ್ತಿರುವ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಬದಲಾಗಿ ಮುಂಜಾಗೃತಾ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕು’ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ಸಲಹೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ವಿಡಿಯೊ ಸಂವಾದದಲ್ಲಿ ಅವರು ಮಾತನಾಡಿದರು.</p>.<p>‘ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಂಕಿ– ಅಂಶಗಳನ್ನು ಬಿತ್ತರಿಸುತ್ತಿರುವುದು ಜನರನ್ನು ಹೆದರಿಸುವ ಕಾರಣಕ್ಕಲ್ಲ. ಬದಲಾಗಿ ಎಚ್ಚೆತ್ತುಕೊಂಡು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ವೈರಸ್ ಹರಡದಂತೆತಡೆಯುವ ಸಲುವಾಗಿ’ ಎಂದು ಹೇಳಿದರು.</p>.<p>ಹೆಚ್ಚಿನ ಜನರು ಸೇರುವ ಸಭೆ ಸಮಾರಂಭಗಳಲ್ಲಿ ಅನವಶ್ಯಕವಾಗಿ ಭಾಗವಹಿಸದೇ ಕೆಲವು ದಿನಗಳ ಕಾಲ ಆದಷ್ಟೂ ಜಾಗೃತರಾಗಿರುವುದು ಉತ್ತಮ ಎಂದು ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಡಾ.ಕೆ.ಹರೀಶ ಕುಮಾರಮಾತನಾಡಿ, ‘ಮುಂಜಾಗೃತಾ ಕ್ರಮವಾಗಿ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಶಿಘ್ರದಲ್ಲಿಯೇ ಅವೂಮುಕ್ತಾಯಗೊಳ್ಳಲಿವೆ. ಪ್ರತಿಯೊಬ್ಬರು ಆರೋಗ್ಯದ ಹಿತದೃಷ್ಟಿಯಿಂದ14 ದಿನಗಳ ಕಾಲ ವೈಯಕ್ತಿಕ ಕಡಿವಾಣ ಹಾಕಿಕೊಳ್ಳುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಈ ಸಂದರ್ಭದಲ್ಲಿ ಕುಡಿಯುವ ನೀರು, ಶಿಕ್ಷಣ, ನೆರೆ ಹಾನಿ ಮತ್ತು ಬರ ಪರಿಹಾರ, ಸಪ್ತಪದಿ ಸಾಮೂಹಿಕ ವಿವಾಹ, ಮರಳು ಗಣಿಗಾರಿಕೆ ಸೇರಿದಂತೆವಿವಿಧ ವಿಷಯಗಳ ಬಗ್ಗೆ ಉಸ್ತುವಾರಿ ಕಾರ್ಯದರ್ಶಿ ಮುನೀಶ್ ಮೌದ್ಗೀಲ್ಮಾಹಿತಿಪಡೆದುಕೊಂಡರು.</p>.<p>ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಅಧಿಕಾರಿಮೊಹಮ್ಮದ್ರೋಶನ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಿ.ಎನ್.ಅಶೋಶ ಕುಮಾರ್, ಕಾರವಾರ ಉಪ ವಿಭಾಗಾಧಿಕಾರಿ ಎಂ.ಪ್ರಿಯಾಂಗಾ, ಡಾ.ವಿನೋದ್ ಭೂತೆಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಕೊರೊನಾ 2 ವೈರಸ್ ಹರಡುತ್ತಿರುವ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಬದಲಾಗಿ ಮುಂಜಾಗೃತಾ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕು’ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ಸಲಹೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ವಿಡಿಯೊ ಸಂವಾದದಲ್ಲಿ ಅವರು ಮಾತನಾಡಿದರು.</p>.<p>‘ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಂಕಿ– ಅಂಶಗಳನ್ನು ಬಿತ್ತರಿಸುತ್ತಿರುವುದು ಜನರನ್ನು ಹೆದರಿಸುವ ಕಾರಣಕ್ಕಲ್ಲ. ಬದಲಾಗಿ ಎಚ್ಚೆತ್ತುಕೊಂಡು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ವೈರಸ್ ಹರಡದಂತೆತಡೆಯುವ ಸಲುವಾಗಿ’ ಎಂದು ಹೇಳಿದರು.</p>.<p>ಹೆಚ್ಚಿನ ಜನರು ಸೇರುವ ಸಭೆ ಸಮಾರಂಭಗಳಲ್ಲಿ ಅನವಶ್ಯಕವಾಗಿ ಭಾಗವಹಿಸದೇ ಕೆಲವು ದಿನಗಳ ಕಾಲ ಆದಷ್ಟೂ ಜಾಗೃತರಾಗಿರುವುದು ಉತ್ತಮ ಎಂದು ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಡಾ.ಕೆ.ಹರೀಶ ಕುಮಾರಮಾತನಾಡಿ, ‘ಮುಂಜಾಗೃತಾ ಕ್ರಮವಾಗಿ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಶಿಘ್ರದಲ್ಲಿಯೇ ಅವೂಮುಕ್ತಾಯಗೊಳ್ಳಲಿವೆ. ಪ್ರತಿಯೊಬ್ಬರು ಆರೋಗ್ಯದ ಹಿತದೃಷ್ಟಿಯಿಂದ14 ದಿನಗಳ ಕಾಲ ವೈಯಕ್ತಿಕ ಕಡಿವಾಣ ಹಾಕಿಕೊಳ್ಳುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಈ ಸಂದರ್ಭದಲ್ಲಿ ಕುಡಿಯುವ ನೀರು, ಶಿಕ್ಷಣ, ನೆರೆ ಹಾನಿ ಮತ್ತು ಬರ ಪರಿಹಾರ, ಸಪ್ತಪದಿ ಸಾಮೂಹಿಕ ವಿವಾಹ, ಮರಳು ಗಣಿಗಾರಿಕೆ ಸೇರಿದಂತೆವಿವಿಧ ವಿಷಯಗಳ ಬಗ್ಗೆ ಉಸ್ತುವಾರಿ ಕಾರ್ಯದರ್ಶಿ ಮುನೀಶ್ ಮೌದ್ಗೀಲ್ಮಾಹಿತಿಪಡೆದುಕೊಂಡರು.</p>.<p>ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಅಧಿಕಾರಿಮೊಹಮ್ಮದ್ರೋಶನ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಿ.ಎನ್.ಅಶೋಶ ಕುಮಾರ್, ಕಾರವಾರ ಉಪ ವಿಭಾಗಾಧಿಕಾರಿ ಎಂ.ಪ್ರಿಯಾಂಗಾ, ಡಾ.ವಿನೋದ್ ಭೂತೆಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>