ಫೆಡರೇಷನ್ ಆಫ್ ಲಾರಿ ಓನರ್ಸ್ ಮತ್ತು ಏಜೆಂಟ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ರಾಮಪ್ಪ ಪಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಲಾಕ್ಡೌನ್ನಿಂದಾಗಿ ಚಾಲಕರು ಏಕಾಏಕಿ ಸಂಕಷ್ಟದಲ್ಲಿ ಸಿಲುಕಿದರು. ಸರ್ಕಾರ ಒಂದು ದಿನ ಮೊದಲೇ ಮಾಹಿತಿ ನೀಡಿದ್ದರೆ, ಅವರು ತಮ್ಮ ಮನೆಗಳಿಗೆ ತೆರಳುತ್ತಿದ್ದರು. ಊಟ, ವಸತಿ, ನೀರು ಸಿಗದೇ ಬಹಳಷ್ಟು ಕಷ್ಟ ಅನುಭವಿಸಬೇಕಾಯಿತು. ಸರ್ಕಾರ ಕಾರು, ಟ್ಯಾಕ್ಸಿ ಚಾಲಕ ಮಾಲೀಕರಿಗೆ ಸರ್ಕಾರ ಅನುಕೂಲ ಮಾಡಿದಂತೆ ಲಾರಿ ಚಾಲಕರು ಹಾಗೂ ಮಾಲೀಕರಿಗೂ ಅನುಕೂಲತೆ ಕಲ್ಪಿಸಿ ಕೊಡಬೇಕು’ ಎಂದು ಸಚಿವರಲ್ಲಿ ಮನವಿ ಮಾಡಿದರು.