ಮಾರ್ಚ್ 21ಕ್ಕೆ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ 40 ವರ್ಷದ ಪುರುಷ, ತಮ್ಮದೇ ವಾಹನದಲ್ಲಿ ಸಹೋದರ ಸಂಬಂಧಿ ಜೊತೆ ಭಟ್ಕಳದ ಮನೆಗೆ ಬಂದಿದ್ದರು. ನಂತರ ಅರ್ಧ ಗಂಟೆ ಮನೆಯಲ್ಲಿದ್ದು, ತಾಲ್ಲೂಕು ಆಸ್ಪತ್ರೆಗೆ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಅವರ ಗಂಟಲುದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.