ಮನೆಗಳಿಗೆ ಆಹಾರ ಪೂರೈಕೆ:ಜೀವನಾವಶ್ಯಕ ವಸ್ತುಗಳನ್ನು ಜಿಲ್ಲೆಯ ಗ್ರಾಮೀಣಪ್ರದೇಶಗಳ ನಿವಾಸಿಗಳಿಗೆ ತಲುಪಿಸುವ ಕಾರ್ಯವೂ ಆರಂಭವಾಗಿದೆ. ಹಲವಾರು ಮನೆಗಳಿಗೆ ಜಿಲ್ಲಾಡಳಿತ ಗುರುತಿಸಿದ ವಾಹನಗಳಲ್ಲಿ ಸಾಮಗ್ರಿಗಳನ್ನು ಈಗಾಗಲೇ ತಲುಪಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆಗಳ ಸಹಯೋಗದಲ್ಲಿ ಈ ಕಾರ್ಯ ಆರಂಭವಾಗಿದೆ. ಇದರಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಉಪ ವಿಭಾಗಾಧಿಕಾರಿಗಳು, ತಾಲ್ಲೂಕು ಪಂಚಾಯ್ತಿಗಳ ಕಾರ್ಯ ನಿರ್ವಹಣಾ ಅಧಿಕಾರಿಗಳು ಮತ್ತು ತಹಸೀಲ್ದಾರರು ಕೂಡ ತೊಡಗಿಕೊಂಡಿದ್ದಾರೆ.