<p><strong>ಶಿರಸಿ</strong>: ತಾಲ್ಲೂಕಿನಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜನರು ಆತಂಕಗೊಂಡಿದ್ದಾರೆ. ಬೆಂಗಳೂರಿನಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಸೋಮವಾರ ಸೋಂಕು ದೃಢಪಟ್ಟಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.</p>.<p>ಜ್ವರದಿಂದ ಬಳಲುತ್ತಿದ್ದ ತಾಲ್ಲೂಕಿನ ಬಾಳಗಾರದ ಈ ವ್ಯಕ್ತಿ, ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಜ್ವರದ ಲಕ್ಷಣಗಳನ್ನು ಗಮನಿಸಿ, ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅವರಿಗೆ ಸೋಂಕು ಇರುವುದು ಖಚಿತವಾಗಿರುವ ಕಾರಣ, ಕಾರವಾರದ ಕ್ರಿಮ್ಸ್ಗೆ ಚಿಕಿತ್ಸೆಗೆ ಕಳುಹಿಸಲಾಗಿತ್ತು. ಅವರು ಶನಿವಾರ ಬೆಂಗಳೂರಿನಿಂದ ಬರುವಾಗಲೇ ಜ್ವರದಿಂದ ಬಳಲುತ್ತಿದ್ದರು.</p>.<p><strong>ಟಿಎಸ್ಎಸ್ ಸ್ವಯಂಪ್ರೇರಿತ ಬಂದ್</strong>:</p>.<p>ಹೆಚ್ಚು ಕೃಷಿ ವಹಿವಾಟು ನಡೆಯುವ ಇಲ್ಲಿನ ತೋಟಗಾರ್ಸ್ ಕೋ ಆಪರೇಟಿವ್ ಸೇಲ್ ಸೊಸೈಟಿಯನ್ನು ಸ್ವಯಂ ಪ್ರೇರಿತವಾಗಿ ಒಂದು ವಾರ ಬಂದ್ ಮಾಡಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.</p>.<p>’ಕೋವಿಡ್ 19 ಹೆಚ್ಚುತ್ತಿರುವ ಕಾರಣ ಅತಿ ದೊಡ್ಡ ವ್ಯಾಪಾರಿ ಸ್ಥಳವಾದ ಟಿಎಸ್ಎಸ್ನ ಎಲ್ಲ ವ್ಯವಹಾರಗಳನ್ನು ಜುಲೈ 7ರಿಂದ 12ರವರೆಗೆ ಸ್ಥಗಿತಗೊಳಿಸಲಾಗುವುದು. ಜನರ ಓಡಾಟ, ವ್ಯಾವಹಾರಿಕವಾಗಿ ಹೆಚ್ಚು ಜನರು ಸೇರುವುದನ್ನು ನಿಯಂತ್ರಿಸುವುದು ಹಾಗೂ ಆ ಮೂಲಕ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಸಾಮಾಜಿಕ ಕಳಕಳಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ. ಸೂಪರ್ ಮಾರ್ಕೆಟ್, ವ್ಯಾಪಾರಿ ಅಂಗಳ, ಹಣಕಾಸು ವ್ಯವಹಾರ, ಅಕ್ಕಿ ಗಿರಣಿ ವಿಭಾಗಗಳು ಸಂಪೂರ್ಣ ಬಂದಾಗುತ್ತವೆ. ಸಾರ್ವಜನಿಕರ ಸಹ ಸ್ವಯಂ ಪ್ರೇರಿತರಾಗಿ ಓಡಾಟವನ್ನು ನಿಯಂತ್ರಿಸಬೇಕು’ ಎಂದು ಟಿಎಸ್ಎಸ್ ತಿಳಿಸಿದೆ.</p>.<p>ಟಿಎಸ್ಎಸ್ನ ಮುಂಡಗೋಡ, ಸಿದ್ದಾಪುರ, ಯಲ್ಲಾಪುರ ಶಾಖೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ.</p>.<p>ಇಲ್ಲಿನ ಮಾರಿಕಾಂಬಾ ದೇವಾಲಯದ ಪಕ್ಕದಲ್ಲಿರುವ ಮನೆಯ ವ್ಯಕ್ತಿಯಲ್ಲಿ ಕೋವಿಡ್ 19 ದೃಢಪಟ್ಟಿರುವುದರಿಂದ ಒಂದು ದೇವಾಲಯದಲ್ಲಿ ದೇವಿಯ ದರ್ಶನವನ್ನು ನಿರ್ಬಂಧಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಸೋಮವಾರ ದೇವಾಲಯದ ಇಡೀ ಆವರಣವನ್ನು ಸ್ಯಾನಿಟೈಸ್ ಮಾಡಲಾಯಿತು.</p>.<p>ಬಂಗಾರದ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಕೋವಿಡ್ ಸೋಂಕು ಖಚಿತವಾಗಿರುವ ಕಾರಣ ನಗರದ ಎಲ್ಲ ಬಂಗಾರದ ಅಂಗಡಿಗಳನ್ನು ಮೂರು ದಿನಗಳ ಕಾಲ ಬಂದ್ ಮಾಡಲಾಗಿದೆ. ಸರಾಫರ ಸಂಘಟನೆ ಮುಂದಾಗಿ ಈ ನಿರ್ಧಾರ ಪ್ರಕಟಿಸಿದೆ.</p>.<p>ನಗರದ ವ್ಯಾಪಾರಸ್ಥರು ಅರ್ಧ ದಿನ ಮಾತ್ರ ಅಂಗಡಿಗಳನ್ನು ತೆರೆದು, ಸ್ವಯಂ ಪ್ರೇರಣೆಯಿಂದ ಲಾಕ್ಡೌನ್ ಮಾಡಿ, ಕೋವಿಡ್ 19 ದೂರಗೊಳಿಸಬೇಕು ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ತಾಲ್ಲೂಕಿನಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜನರು ಆತಂಕಗೊಂಡಿದ್ದಾರೆ. ಬೆಂಗಳೂರಿನಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಸೋಮವಾರ ಸೋಂಕು ದೃಢಪಟ್ಟಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.</p>.<p>ಜ್ವರದಿಂದ ಬಳಲುತ್ತಿದ್ದ ತಾಲ್ಲೂಕಿನ ಬಾಳಗಾರದ ಈ ವ್ಯಕ್ತಿ, ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಜ್ವರದ ಲಕ್ಷಣಗಳನ್ನು ಗಮನಿಸಿ, ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅವರಿಗೆ ಸೋಂಕು ಇರುವುದು ಖಚಿತವಾಗಿರುವ ಕಾರಣ, ಕಾರವಾರದ ಕ್ರಿಮ್ಸ್ಗೆ ಚಿಕಿತ್ಸೆಗೆ ಕಳುಹಿಸಲಾಗಿತ್ತು. ಅವರು ಶನಿವಾರ ಬೆಂಗಳೂರಿನಿಂದ ಬರುವಾಗಲೇ ಜ್ವರದಿಂದ ಬಳಲುತ್ತಿದ್ದರು.</p>.<p><strong>ಟಿಎಸ್ಎಸ್ ಸ್ವಯಂಪ್ರೇರಿತ ಬಂದ್</strong>:</p>.<p>ಹೆಚ್ಚು ಕೃಷಿ ವಹಿವಾಟು ನಡೆಯುವ ಇಲ್ಲಿನ ತೋಟಗಾರ್ಸ್ ಕೋ ಆಪರೇಟಿವ್ ಸೇಲ್ ಸೊಸೈಟಿಯನ್ನು ಸ್ವಯಂ ಪ್ರೇರಿತವಾಗಿ ಒಂದು ವಾರ ಬಂದ್ ಮಾಡಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.</p>.<p>’ಕೋವಿಡ್ 19 ಹೆಚ್ಚುತ್ತಿರುವ ಕಾರಣ ಅತಿ ದೊಡ್ಡ ವ್ಯಾಪಾರಿ ಸ್ಥಳವಾದ ಟಿಎಸ್ಎಸ್ನ ಎಲ್ಲ ವ್ಯವಹಾರಗಳನ್ನು ಜುಲೈ 7ರಿಂದ 12ರವರೆಗೆ ಸ್ಥಗಿತಗೊಳಿಸಲಾಗುವುದು. ಜನರ ಓಡಾಟ, ವ್ಯಾವಹಾರಿಕವಾಗಿ ಹೆಚ್ಚು ಜನರು ಸೇರುವುದನ್ನು ನಿಯಂತ್ರಿಸುವುದು ಹಾಗೂ ಆ ಮೂಲಕ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಸಾಮಾಜಿಕ ಕಳಕಳಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ. ಸೂಪರ್ ಮಾರ್ಕೆಟ್, ವ್ಯಾಪಾರಿ ಅಂಗಳ, ಹಣಕಾಸು ವ್ಯವಹಾರ, ಅಕ್ಕಿ ಗಿರಣಿ ವಿಭಾಗಗಳು ಸಂಪೂರ್ಣ ಬಂದಾಗುತ್ತವೆ. ಸಾರ್ವಜನಿಕರ ಸಹ ಸ್ವಯಂ ಪ್ರೇರಿತರಾಗಿ ಓಡಾಟವನ್ನು ನಿಯಂತ್ರಿಸಬೇಕು’ ಎಂದು ಟಿಎಸ್ಎಸ್ ತಿಳಿಸಿದೆ.</p>.<p>ಟಿಎಸ್ಎಸ್ನ ಮುಂಡಗೋಡ, ಸಿದ್ದಾಪುರ, ಯಲ್ಲಾಪುರ ಶಾಖೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ.</p>.<p>ಇಲ್ಲಿನ ಮಾರಿಕಾಂಬಾ ದೇವಾಲಯದ ಪಕ್ಕದಲ್ಲಿರುವ ಮನೆಯ ವ್ಯಕ್ತಿಯಲ್ಲಿ ಕೋವಿಡ್ 19 ದೃಢಪಟ್ಟಿರುವುದರಿಂದ ಒಂದು ದೇವಾಲಯದಲ್ಲಿ ದೇವಿಯ ದರ್ಶನವನ್ನು ನಿರ್ಬಂಧಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಸೋಮವಾರ ದೇವಾಲಯದ ಇಡೀ ಆವರಣವನ್ನು ಸ್ಯಾನಿಟೈಸ್ ಮಾಡಲಾಯಿತು.</p>.<p>ಬಂಗಾರದ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಕೋವಿಡ್ ಸೋಂಕು ಖಚಿತವಾಗಿರುವ ಕಾರಣ ನಗರದ ಎಲ್ಲ ಬಂಗಾರದ ಅಂಗಡಿಗಳನ್ನು ಮೂರು ದಿನಗಳ ಕಾಲ ಬಂದ್ ಮಾಡಲಾಗಿದೆ. ಸರಾಫರ ಸಂಘಟನೆ ಮುಂದಾಗಿ ಈ ನಿರ್ಧಾರ ಪ್ರಕಟಿಸಿದೆ.</p>.<p>ನಗರದ ವ್ಯಾಪಾರಸ್ಥರು ಅರ್ಧ ದಿನ ಮಾತ್ರ ಅಂಗಡಿಗಳನ್ನು ತೆರೆದು, ಸ್ವಯಂ ಪ್ರೇರಣೆಯಿಂದ ಲಾಕ್ಡೌನ್ ಮಾಡಿ, ಕೋವಿಡ್ 19 ದೂರಗೊಳಿಸಬೇಕು ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>