<p><strong>ಕಾರವಾರ</strong>: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ, ಎಫ್.ಟಿ.ಎಸ್.ಸಿ – 1 ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ನ್ಯಾಯಾಲಯವು10 ವರ್ಷ ಕಠಿಣ ಜೈಲು ಶಿಕ್ಷೆ, ₹ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.</p>.<p>ಈ ಅಪರಾಧಿಯು 2017ರ ಏ.29ರಂದು ಮಾವಿನ ತೋಟದಲ್ಲಿ ಒಬ್ಬಳೇ ಇದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿಯ ಅಜ್ಜಿ ಬರುವುದನ್ನು ಕಂಡು ಪರಾರಿಯಾಗಿದ್ದ ಆತನನ್ನು ಮುಂಡಗೋಡ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದರು.</p>.<p>ಅಂದಿನ ಸಿ.ಪಿ.ಐ. ಕಿರಣ ಕುಮಾರ ಈ ಪ್ರಕರಣದ ತನಿಖೆ ನಡೆಸಿ, ಪೊಕ್ಸೊಕಾಯ್ದೆಯ ಅನ್ವಯ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಹಾಗೂಸೆಷನ್ಸ್ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ, ಅಪರಾಧಿಗೆ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.ದಂಡ ಪಾವತಿಸಲು ತಪ್ಪಿದಲ್ಲಿಆರುತಿಂಗಳು ಹೆಚ್ಚುವರಿಜೈಲು ಶಿಕ್ಷೆ ವಿಧಿಸುವಂತೆಯೂ ಅವರು ಆದೇಶಿಸಿದ್ದಾರೆ.</p>.<p>ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಸುಭಾಷ ಪಿ. ಕೈರನ್ನ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ, ಎಫ್.ಟಿ.ಎಸ್.ಸಿ – 1 ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ನ್ಯಾಯಾಲಯವು10 ವರ್ಷ ಕಠಿಣ ಜೈಲು ಶಿಕ್ಷೆ, ₹ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.</p>.<p>ಈ ಅಪರಾಧಿಯು 2017ರ ಏ.29ರಂದು ಮಾವಿನ ತೋಟದಲ್ಲಿ ಒಬ್ಬಳೇ ಇದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿಯ ಅಜ್ಜಿ ಬರುವುದನ್ನು ಕಂಡು ಪರಾರಿಯಾಗಿದ್ದ ಆತನನ್ನು ಮುಂಡಗೋಡ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದರು.</p>.<p>ಅಂದಿನ ಸಿ.ಪಿ.ಐ. ಕಿರಣ ಕುಮಾರ ಈ ಪ್ರಕರಣದ ತನಿಖೆ ನಡೆಸಿ, ಪೊಕ್ಸೊಕಾಯ್ದೆಯ ಅನ್ವಯ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಹಾಗೂಸೆಷನ್ಸ್ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ, ಅಪರಾಧಿಗೆ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.ದಂಡ ಪಾವತಿಸಲು ತಪ್ಪಿದಲ್ಲಿಆರುತಿಂಗಳು ಹೆಚ್ಚುವರಿಜೈಲು ಶಿಕ್ಷೆ ವಿಧಿಸುವಂತೆಯೂ ಅವರು ಆದೇಶಿಸಿದ್ದಾರೆ.</p>.<p>ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಸುಭಾಷ ಪಿ. ಕೈರನ್ನ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>