ಬಂಗಾರದ ಕೆಲಸ ಮಾಡುತ್ತಿದ್ದ ಈ ಸೋಂಕಿತ ವ್ಯಕ್ತಿ ಜೂನ್ 23ರಂದು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಿ, ಮರುದಿನ ವಾಪಸ್ಸಾಗಿದ್ದರು. ನಂತರ ಜ್ವರ ಕಾಣಿಸಿಕೊಂಡ ಕಾರಣ ಅವರು, ಜೂನ್ 29ರಂದು ಕ್ಲಿನಿಕ್ಗೆ ಹೋಗಿ ಔಷಧ ತಂದಿದ್ದರು. ಚಿಕಿತ್ಸೆ ನೀಡಿದ ವೈದ್ಯರು, ಈ ವಿಷಯವನ್ನು ತಾಲ್ಲೂಕು ಆಸ್ಪತ್ರೆಯ ಗಮನಕ್ಕೆ ತಂದಿದ್ದರಿಂದ, ಜ್ವರಪೀಡಿತ ವ್ಯಕ್ತಿಯ ಗಂಟಲು ದ್ರವ ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.