‘ಕೊಂಕಣ ರೈಲ್ವೆಯಲ್ಲಿ ಲೆಕ್ಕಪತ್ರ ವಿಭಾಗದ ನೌಕರನಾಗಿದ್ದೇನೆ. ಎನ್.ಆರ್.ಎಂ. ಯೂನಿಯನ್ನ ಕಾರ್ಯಾಧ್ಯಕ್ಷನೂ ಹೌದು. ಕಚೇರಿ ಕೆಲಸಕ್ಕೆಂದು ಮಹಾರಾಷ್ಟ್ರದ ರತ್ನಗಿರಿಗೆ ಹೋಗಿದ್ದೆ. ವಾಪಸ್ ಬಂದಾಗ ಕಾರವಾರದಲ್ಲಿ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಆದರೆ, ಅಧಿಕಾರಿಗಳು ಕ್ವಾರಂಟೈನ್ ಬೇಡ ಎಂದಿದ್ದರು. ಆದರೆ, ಬೇರೆ ರಾಜ್ಯದಿಂದ ಬಂದಿದ್ದ ಕಾರಣ ಹೊನ್ನಾವರ ತಹಶೀಲ್ದಾರ್ ವಿವೇಕ ಶೇಣ್ವಿ ಸೂಚನೆ ನೀಡಿ ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಿಸಿದರು.’