ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಾದ್ಯಂತ ಚಳವಳಿಗೆ ಸಿಪಿಐ (ಎಂ) ನಿರ್ಧಾರ

Last Updated 6 ಫೆಬ್ರುವರಿ 2020, 14:55 IST
ಅಕ್ಷರ ಗಾತ್ರ

ಕಾರವಾರ: ‘ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವನೋಂದಣಿ ಕಾಯ್ದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ.ಅವುಗಳ ವಿರುದ್ಧ ದೇಶದಾದ್ಯಂತ ಚಳವಳಿ ನಡೆಸಲು ಸಿಪಿಐ (ಎಂ) ನಿರ್ಧರಿಸಿದೆ’ ಎಂದು ಪಕ್ಷದ ಪಾಲಿಟ್‌ ಬ್ಯುರೊ ಸದಸ್ಯ ಡಿ.ವಿ. ರಾಘವುಲು ಹೇಳಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪೌರತ್ವ (ತಿದ್ದುಪಡಿ) ಕಾಯ್ದೆಯು ತಾರತಮ್ಯ ಮಾಡುತ್ತದೆ. ಆದ್ದರಿಂದ ಈ ಕಾಯ್ದೆಯನ್ನು ವಿರೋಧಿಸಲು ಎಲ್ಲ ರಾಜ್ಯಗಳಿಗೆ ನಮ್ಮ ಪಕ್ಷವು ಮನವಿ ಮಾಡಿದೆ. ಅಲ್ಲದೇರಾಷ್ಟ್ರೀಯ ಪೌರತ್ವನೋಂದಣಿ ಮೂಲಕವೂ ಅನ್ಯಾಯವಾಗಲಿದೆ. ಆದ್ದರಿಂದ ಈ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

‘ಕೊಪ್ಪಳದಲ್ಲಿಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಕವನ ಬರೆದು ವಾಚಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದುಅಭಿವ್ಯಕ್ತಿ ಸ್ವಾತಂತ್ರ್ಯದ ದಮನಿಸಿದಂತಾಗಿದೆ. ಆದ್ದರಿಂದ ಆ ಪ್ರಕರಣವನ್ನು ಹಿಂಪಡೆಯಬೇಕು. ಬೀದರ್‌ನಲ್ಲಿ ಕಾಯ್ದೆಯ ವಿರುದ್ಧ ನಡೆದ ನಾಟಕ ಪ್ರದರ್ಶನದಲ್ಲಿ ಪಾಲ್ಗೊಂಡ ಬಾಲಕಿಯ ತಾಯಿಯನ್ನು ಬಿಡುಗಡೆ ಮಾಡಿ ಪ್ರಕರಣ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ಕ್ರಮಕ್ಕೆ ಒತ್ತಾಯ:‘ಸಂಸದ ಅನಂತಕುಮಾರ ಹೆಗಡೆ ಗಾಂಧೀಜಿ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆ.ಅವರ ಪಕ್ಷದಿಂದ ಶೋಕಾಸ್ ನೋಟಿಸ್ ಕೊಟ್ಟರೂ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಅವರ ವಿರುದ್ಧ ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಮುಖಂಡ ಜಿ.ಎನ್.ನಾಗರಾಜ ಮಾತನಾಡಿ, ‘ಬೆಂಗಳೂರಿನಲ್ಲಿ ಈಚೆಗೆ ಬಿಸಿಯೂಟದ ಕಾರ್ಯಕರ್ತೆಯರು ಧರಣಿ ಸಂದರ್ಭದಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಆದರೂ ಧರಣಿ ಮಾಡಿದವರ ವಿರುದ್ಧ‍ಪ್ರಕರಣ ದಾಖಲಿಸಲಾಗಿದ್ದು, ಅದನ್ನು ರದ್ದು ಮಾಡಬೇಕು’ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಯಮುನಾ ಗಾಂವ್ಕರ್, ಶಾಂತಾರಾಮ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT