ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿರುಕು ಬಿಟ್ಟ ಗುಡ್ಡ: ವಾಹನ ಸಂಚಾರ ಸ್ಥಗಿತ

Last Updated 23 ಸೆಪ್ಟೆಂಬರ್ 2020, 6:48 IST
ಅಕ್ಷರ ಗಾತ್ರ

ಕಾರವಾರ: ತಾಲ್ಲೂಕಿನ ಮಲ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರೂರು ಸಮೀಪ ಗುಡ್ಡ ಬಿರುಕು ಬಿಟ್ಟಿದೆ. ರಸ್ತೆಯ ನಡುವೆ ಸುಮಾರು ಆರು ಇಂಚುಗಳಷ್ಟು ಬಿರುಕು ಕಾಣಿಸಿಕೊಂಡಿದೆ.

ಮಲ್ಲಾಪುರದಿಂದ ಕೈಗಾಕ್ಕೆ ಸಾಗಿ ಹರೂರು- ಬಾರೆ ಮೂಲಕ ಯಲ್ಲಾಪುರ ತಾಲ್ಲೂಕಿನ ಇಡಗುಂದಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಈ ಭಾಗದಲ್ಲಿ ಮನೆಗಳಿಲ್ಲ. ಕಾಡಿನ ಮಧ್ಯೆ ಸಾಗುವ ದಾರಿ ಇದಾಗಿದ್ದು, ಗುಡ್ಡ ಕುಸಿದರೆ ಇಡಗುಂದಿ- ಮಲ್ಲಾಪುರ ನಡುವೆ ಸಂಪರ್ಕ ಕಡಿತವಾಗಲಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ನಿಲ್ಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT