ಆಸ್ಪತ್ರೆಯ ನೂತನ ಕಟ್ಟಡದ ತುಂಬಬಿರುಕು ಕಾಣಿಸಿಕೊಂಡಿದೆ.ಇಂತಹ ಕಟ್ಟಡದಲ್ಲಿರೋಗಿಗಳು, ವೈದ್ಯರು ಮತ್ತು ಸಿಬ್ಬಂದಿ ತಂಗಬಹುದೇ ಎಂಬ ಸಂದೇಹ ವ್ಯಕ್ತವಾಗುತ್ತಿದೆ. ಇತ್ತೀಚೆಗಷ್ಟೆ ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದು, ಅನೇಕರ ಪ್ರಾಣ ತೆಗೆದಿದೆ. ಅಂತಹ ಮತ್ತೊಂದು ದುರಂತ ಸಂಭವಿಸುವ ಮೊದಲು ಅಧಿಕಾರಿಗಳು, ಜನಪ್ರತಿನಿಧಿಗಳು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪಟ್ಟಣದ ನಿವಾಸಿ ನಾಗರಾಜ ಆಗ್ರಹಿಸಿದ್ದಾರೆ.