ನದಿಯ ಕೆಲವು ಪ್ರದೇಶಗಳಲ್ಲಿ ದೋಣಿಯಲ್ಲಿ ಪ್ರಯಾಣಿಸಿದ ಅಧಿಕಾರಿಗಳು, ಮರಳು ತುಂಬಿರುವ ಜಾಗವನ್ನು ವೀಕ್ಷಿಸಿದರು. ಜೈವಿಕ ಸೂಕ್ಷ್ಮ ಪ್ರದೇಶವೆಂಬ ಕಾರಣದಿಂದ ಈ ನದಿಯಲ್ಲಿ ಮರಳು ಗಣಿಗಾರಿಕೆಯನ್ನು ನಿಷೇಧಿಸಲಾಗಿದೆ. ಇಲ್ಲಿ ಜಿಲ್ಲೆಯ ಇತರ ನದಿಗಳಂತೆಯೇ ಮರಳು ತೆಗೆಯಲು ಅವಕಾಶ ನೀಡಬೇಕು ಎಂದು ಈಚೆಗೆ ಕೆಲವು ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.