<p><strong>ಕಾರವಾರ: </strong>ಕಾಳಿ ನದಿಯಲ್ಲಿ ಮರಳು ಗಣಿಗಾರಿಕೆಯ ಮೇಲಿನ ನಿಷೇಧವನ್ನು ತೆರವು ಮಾಡಲು ಸಾಧ್ಯವೇ ಎಂದು ಪರಾಮರ್ಶಿಸಲು ಕರಾವಳಿ ನಿಯಂತ್ರಣ ವಲಯದ (ಸಿಆರ್ಝೆಡ್) ಅಧಿಕಾರಿಗಳ ತಂಡ ಗುರುವಾರ ಮರು ಪರಿಶೀಲನೆ ನಡೆಸಿತು.</p>.<p>ನದಿಯ ಕೆಲವು ಪ್ರದೇಶಗಳಲ್ಲಿ ದೋಣಿಯಲ್ಲಿ ಪ್ರಯಾಣಿಸಿದ ಅಧಿಕಾರಿಗಳು, ಮರಳು ತುಂಬಿರುವ ಜಾಗವನ್ನು ವೀಕ್ಷಿಸಿದರು. ಜೈವಿಕ ಸೂಕ್ಷ್ಮ ಪ್ರದೇಶವೆಂಬ ಕಾರಣದಿಂದ ಈ ನದಿಯಲ್ಲಿ ಮರಳು ಗಣಿಗಾರಿಕೆಯನ್ನು ನಿಷೇಧಿಸಲಾಗಿದೆ. ಇಲ್ಲಿ ಜಿಲ್ಲೆಯ ಇತರ ನದಿಗಳಂತೆಯೇ ಮರಳು ತೆಗೆಯಲು ಅವಕಾಶ ನೀಡಬೇಕು ಎಂದು ಈಚೆಗೆ ಕೆಲವು ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.</p>.<p>ಈ ಬಗ್ಗೆ ಕಾಂಗ್ರೆಸ್ ಮುಖಂಡ ಸತೀಶ್ ಸೈಲ್ ಅವರೂಕಳೆದ ವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರ ಗಮನಕ್ಕೂ ತಂದಿದ್ದರು. ಕಾಳಿ ನದಿಯು ಸಿಆರ್ಝೆಡ್ ವ್ಯಾಪ್ತಿಯಲ್ಲಿ ಬರುವುದಿಲ್ಲ. ಆದ್ದರಿಂದ ನಿಷೇಧವನ್ನು ಮರುಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದ್ದರು.</p>.<p>ನದಿಯಲ್ಲಿ ಮರಳು ದಿಬ್ಬಗಳನ್ನು ಗುರುತಿಸಲು ವಾಸ್ತವ ಪರಿಸ್ಥಿತಿ ಅರಿತುಕೊಳ್ಳುವಂತೆ ಸಚಿವರು ಸಿಆರ್ಝೆಡ್ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಆರ್ಎಫ್ಒ ಪ್ರಸನ್ನ ಪಟಗಾರ್ ಅವರ ನೇತೃತ್ವದ ತಂಡವು ಭೇಟಿ ನೀಡಿತು. ಈ ತಂಡವುಕರ್ನಾಟಕ ಕರಾವಳಿ ವಲಯ ನಿರ್ವಹಣೆ ಯೋಜನೆಯ ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಿದೆ. ಅದನ್ನು ಆಧರಿಸಿಕಾಳಿ ನದಿಯಿಂದ ಮರಳು ತೆಗೆಯಲು ಅನುಮತಿ ನೀಡುವುದು ಅಥವಾ ನಿಷೇಧ ಮುಂದುವರಿಸುವ ಬಗ್ಗೆ ನಿರ್ಧಾರವಾಗಲಿದೆ.</p>.<p>ಪರಿಶೀಲನೆಯ ಸಂದರ್ಭ ಸತೀಶ್ ಸೈಲ್, ಕಾರವಾರ ಮರಳು ಹೋರಾಟಗಾರರ ಸಮಿತಿ ಅಧ್ಯಕ್ಷ ದಿಗಂಬರ ಶೇಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಕಾಳಿ ನದಿಯಲ್ಲಿ ಮರಳು ಗಣಿಗಾರಿಕೆಯ ಮೇಲಿನ ನಿಷೇಧವನ್ನು ತೆರವು ಮಾಡಲು ಸಾಧ್ಯವೇ ಎಂದು ಪರಾಮರ್ಶಿಸಲು ಕರಾವಳಿ ನಿಯಂತ್ರಣ ವಲಯದ (ಸಿಆರ್ಝೆಡ್) ಅಧಿಕಾರಿಗಳ ತಂಡ ಗುರುವಾರ ಮರು ಪರಿಶೀಲನೆ ನಡೆಸಿತು.</p>.<p>ನದಿಯ ಕೆಲವು ಪ್ರದೇಶಗಳಲ್ಲಿ ದೋಣಿಯಲ್ಲಿ ಪ್ರಯಾಣಿಸಿದ ಅಧಿಕಾರಿಗಳು, ಮರಳು ತುಂಬಿರುವ ಜಾಗವನ್ನು ವೀಕ್ಷಿಸಿದರು. ಜೈವಿಕ ಸೂಕ್ಷ್ಮ ಪ್ರದೇಶವೆಂಬ ಕಾರಣದಿಂದ ಈ ನದಿಯಲ್ಲಿ ಮರಳು ಗಣಿಗಾರಿಕೆಯನ್ನು ನಿಷೇಧಿಸಲಾಗಿದೆ. ಇಲ್ಲಿ ಜಿಲ್ಲೆಯ ಇತರ ನದಿಗಳಂತೆಯೇ ಮರಳು ತೆಗೆಯಲು ಅವಕಾಶ ನೀಡಬೇಕು ಎಂದು ಈಚೆಗೆ ಕೆಲವು ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.</p>.<p>ಈ ಬಗ್ಗೆ ಕಾಂಗ್ರೆಸ್ ಮುಖಂಡ ಸತೀಶ್ ಸೈಲ್ ಅವರೂಕಳೆದ ವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರ ಗಮನಕ್ಕೂ ತಂದಿದ್ದರು. ಕಾಳಿ ನದಿಯು ಸಿಆರ್ಝೆಡ್ ವ್ಯಾಪ್ತಿಯಲ್ಲಿ ಬರುವುದಿಲ್ಲ. ಆದ್ದರಿಂದ ನಿಷೇಧವನ್ನು ಮರುಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದ್ದರು.</p>.<p>ನದಿಯಲ್ಲಿ ಮರಳು ದಿಬ್ಬಗಳನ್ನು ಗುರುತಿಸಲು ವಾಸ್ತವ ಪರಿಸ್ಥಿತಿ ಅರಿತುಕೊಳ್ಳುವಂತೆ ಸಚಿವರು ಸಿಆರ್ಝೆಡ್ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಆರ್ಎಫ್ಒ ಪ್ರಸನ್ನ ಪಟಗಾರ್ ಅವರ ನೇತೃತ್ವದ ತಂಡವು ಭೇಟಿ ನೀಡಿತು. ಈ ತಂಡವುಕರ್ನಾಟಕ ಕರಾವಳಿ ವಲಯ ನಿರ್ವಹಣೆ ಯೋಜನೆಯ ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಿದೆ. ಅದನ್ನು ಆಧರಿಸಿಕಾಳಿ ನದಿಯಿಂದ ಮರಳು ತೆಗೆಯಲು ಅನುಮತಿ ನೀಡುವುದು ಅಥವಾ ನಿಷೇಧ ಮುಂದುವರಿಸುವ ಬಗ್ಗೆ ನಿರ್ಧಾರವಾಗಲಿದೆ.</p>.<p>ಪರಿಶೀಲನೆಯ ಸಂದರ್ಭ ಸತೀಶ್ ಸೈಲ್, ಕಾರವಾರ ಮರಳು ಹೋರಾಟಗಾರರ ಸಮಿತಿ ಅಧ್ಯಕ್ಷ ದಿಗಂಬರ ಶೇಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>