‘ವಿಶ್ವಕರ್ಮ ಸಮಾಜ ಮತ್ತು ದೈವಜ್ಞ ಬ್ರಾಹ್ಮಣ ಸಮುದಾಯಕ್ಕೆ ಸಂಬಂಧವಿಲ್ಲ. ದೈವಜ್ಞರನ್ನು ಮೀಸಲಾತಿಯಿಂದ ಹೊರಗಿಡಬೇಕು ಎಂದು ನಂಜುಂಡಿ ಹೇಳಿದ್ದರು. ಈ ಹೇಳಿಕೆಯನ್ನು ಖಂಡಿಸಿ, ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ, ಬಿ.ಜೆ.ಪಿ ರಾಜ್ಯ ಘಟಕದ ಅಧ್ಯಕ್ಷರು, ವಿಧಾನಸಭೆಯ ಸಭಾಧ್ಯಕ್ಷರಿಗೆ ಮನವಿ ಮಾಡಲಾಗಿತ್ತು. ಆದರೆ, ಈವರೆಗೆ ಯಾವುದೇ ಕ್ರಮವಾಗಿಲ್ಲ. ಇದರಿಂದ ಸಮಾಜವು ಬೇಸರಗೊಂಡಿದ್ದು, ಈ ಪಕ್ಷದ ಜೊತೆಗೆ ಯಾಕೆ ಗುರುತಿಸಿಕೊಳ್ಳಬೇಕು ಎಂದು ರಾಜ್ಯದಾದ್ಯಂತ ಕೂಗು ಪ್ರಾರಂಭವಾಗಿದೆ’ ಎಂದು ಹೇಳಿದರು.