<p><strong>ಕಾರವಾರ:</strong> ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರ ಸಂಸ್ಥೆ ಐಆರ್ಬಿಅಧಿಕಾರಿಗಳಿಗೆ ಜಿಲ್ಲಾಧಿಕಾರಿಡಾ.ಕೆ.ಹರೀಶಕುಮಾರ್ ಸೂಚಿಸಿದ್ದಾರೆ. ಅವರು ಕುಮಟಾ, ಹೊನ್ನಾವರ ಮತ್ತು ಭಟ್ಕಳ ಭಾಗದಲ್ಲಿಬುಧವಾರ ಖುದ್ದು ರಸ್ತೆ ಕಾಮಗಾರಿ ಪರಿಶೀಲಿಸಿದರು.</p>.<p>ಕುಮಟಾದಲ್ಲಿ ಸೀಬರ್ಡ್, ಐಆರ್ಬಿ ಅಧಿಕಾರಿಹಾಗೂವಿವಿಧ ಹಂತಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಭೂಸ್ವಾಧೀನ ಆಗಿದ್ದರೂ ಕಾಮಗಾರಿ ತ್ವರಿತವಾಗಿ ಆಗದಿರುವ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದರು. ಕಾಮಗಾರಿ ನಡೆಯುತ್ತಿರುವ ಕಾರಣವಾಹನಸಂಚಾರದಲ್ಲಿ ಭಾರಿವ್ಯತ್ಯಯಗಳಾಗುತ್ತಿವೆ. ಅಪಘಾತಗಳೂ ಹೆಚ್ಚುತ್ತಿವೆ. ಮಳೆಗಾಲವಾದ್ದರಿಂದ ಕಾಮಗಾರಿ ಮತ್ತಷ್ಟು ವಿಳಂಬವಾಗುತ್ತಿದೆಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಮಳೆಗಾಲದಲ್ಲಿ ಸಾರ್ವಜನಿಕರ ಸಹಜ ಬದುಕಿಗೆ ಯಾವುದೇ ತೊಂದರೆ ಆಗದಂತೆ ರಸ್ತೆ ಕಾಮಗಾರಿ ನಡೆಸಬೇಕು. ಈಗಾಗಲೇ ಸೂಚಿಸಿದಂತೆ ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ಸಂಭವನೀಯ ಅವಘಡ ಸ್ಥಳಗಳನ್ನು ಗುರುತಿಸಬೇಕು. ಜೆಸಿಬಿ, ಟಿಪ್ಪರ್ಗಳನ್ನು ಮಳೆಗಾಲ ಮುಗಿಯುವವರೆಗೆ ನಿಯೋಜಿಸಬೇಕು’ ಎಂದು ಅವರು ಸೂಚಿಸಿದರು.</p>.<p>‘ರಸ್ತೆ ಕಾಮಗಾರಿಗಾಗಿ ಆಸ್ತಿ ಕಳೆದುಕೊಂಡವರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಪ್ರಕರಣ ಇತ್ಯರ್ಥವಾಗಿರುವವರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸ್ಥಳೀಯ ಸಹಾಯಕ ಕಮಿಷನರ್ ಐಆರ್ಬಿಗೆಭೂಸ್ವಾಧೀನ ಮಾಡಿಕೊಡಬೇಕು’ ಎಂದೂ ತಿಳಿಸಿದರು.</p>.<p>ಕುಮಟಾ ಭಾಗದಲ್ಲಿ 18 ಕಡೆಗಳಲ್ಲಿ ಈಗಾಗಲೇ ಭೂಸ್ವಾಧೀನವಾಗಿದೆ.ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕುಎಂದುಐಆರ್ಬಿಅಧಿಕಾರಿಗಳಿಗೆ ಗಡುವು ನೀಡಿದರು. ಹೊನ್ನಾವರ, ಭಟ್ಕಳ ಪ್ರದೇಶದ ಆರು ಕಡೆಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣ ಮಾಡಿ ಕೊಡಲಾಗುವುದು ಎಂದರು.</p>.<p>ರಸ್ತೆ ಕಾಮಗಾರಿ ಸಂಬಂಧಿಸಿದಂತೆ ಪ್ರತಿ ತಿಂಗಳೂ ಪ್ರಗತಿ ಪರಿಶೀಲನೆ ಮಾಡಲಾಗುವುದು. ಭೂಸ್ವಾಧೀನ ಇಲಾಖೆ ಅಧಿಕಾರಿಗಳು, ತಹಶೀಲ್ದಾರ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕನಿಷ್ಠ ಮೂರು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನೆ ಮಾಡಬೇಕು ಎಂದು ಸೂಚಿಸಿದರು.</p>.<p>ಸಭೆಯಲ್ಲಿ ಕುಮಟಾಉಪವಿಭಾಗಾಧಿಕಾರಿಪ್ರೀತಿ ಗೆಹ್ಲೋಟ್, ತಹಶೀಲ್ದಾರ್ ಮೇಘರಾಜ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯವಸ್ಥಾಪಕ ನವೀನ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರ ಸಂಸ್ಥೆ ಐಆರ್ಬಿಅಧಿಕಾರಿಗಳಿಗೆ ಜಿಲ್ಲಾಧಿಕಾರಿಡಾ.ಕೆ.ಹರೀಶಕುಮಾರ್ ಸೂಚಿಸಿದ್ದಾರೆ. ಅವರು ಕುಮಟಾ, ಹೊನ್ನಾವರ ಮತ್ತು ಭಟ್ಕಳ ಭಾಗದಲ್ಲಿಬುಧವಾರ ಖುದ್ದು ರಸ್ತೆ ಕಾಮಗಾರಿ ಪರಿಶೀಲಿಸಿದರು.</p>.<p>ಕುಮಟಾದಲ್ಲಿ ಸೀಬರ್ಡ್, ಐಆರ್ಬಿ ಅಧಿಕಾರಿಹಾಗೂವಿವಿಧ ಹಂತಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಭೂಸ್ವಾಧೀನ ಆಗಿದ್ದರೂ ಕಾಮಗಾರಿ ತ್ವರಿತವಾಗಿ ಆಗದಿರುವ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದರು. ಕಾಮಗಾರಿ ನಡೆಯುತ್ತಿರುವ ಕಾರಣವಾಹನಸಂಚಾರದಲ್ಲಿ ಭಾರಿವ್ಯತ್ಯಯಗಳಾಗುತ್ತಿವೆ. ಅಪಘಾತಗಳೂ ಹೆಚ್ಚುತ್ತಿವೆ. ಮಳೆಗಾಲವಾದ್ದರಿಂದ ಕಾಮಗಾರಿ ಮತ್ತಷ್ಟು ವಿಳಂಬವಾಗುತ್ತಿದೆಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಮಳೆಗಾಲದಲ್ಲಿ ಸಾರ್ವಜನಿಕರ ಸಹಜ ಬದುಕಿಗೆ ಯಾವುದೇ ತೊಂದರೆ ಆಗದಂತೆ ರಸ್ತೆ ಕಾಮಗಾರಿ ನಡೆಸಬೇಕು. ಈಗಾಗಲೇ ಸೂಚಿಸಿದಂತೆ ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ಸಂಭವನೀಯ ಅವಘಡ ಸ್ಥಳಗಳನ್ನು ಗುರುತಿಸಬೇಕು. ಜೆಸಿಬಿ, ಟಿಪ್ಪರ್ಗಳನ್ನು ಮಳೆಗಾಲ ಮುಗಿಯುವವರೆಗೆ ನಿಯೋಜಿಸಬೇಕು’ ಎಂದು ಅವರು ಸೂಚಿಸಿದರು.</p>.<p>‘ರಸ್ತೆ ಕಾಮಗಾರಿಗಾಗಿ ಆಸ್ತಿ ಕಳೆದುಕೊಂಡವರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಪ್ರಕರಣ ಇತ್ಯರ್ಥವಾಗಿರುವವರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸ್ಥಳೀಯ ಸಹಾಯಕ ಕಮಿಷನರ್ ಐಆರ್ಬಿಗೆಭೂಸ್ವಾಧೀನ ಮಾಡಿಕೊಡಬೇಕು’ ಎಂದೂ ತಿಳಿಸಿದರು.</p>.<p>ಕುಮಟಾ ಭಾಗದಲ್ಲಿ 18 ಕಡೆಗಳಲ್ಲಿ ಈಗಾಗಲೇ ಭೂಸ್ವಾಧೀನವಾಗಿದೆ.ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕುಎಂದುಐಆರ್ಬಿಅಧಿಕಾರಿಗಳಿಗೆ ಗಡುವು ನೀಡಿದರು. ಹೊನ್ನಾವರ, ಭಟ್ಕಳ ಪ್ರದೇಶದ ಆರು ಕಡೆಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣ ಮಾಡಿ ಕೊಡಲಾಗುವುದು ಎಂದರು.</p>.<p>ರಸ್ತೆ ಕಾಮಗಾರಿ ಸಂಬಂಧಿಸಿದಂತೆ ಪ್ರತಿ ತಿಂಗಳೂ ಪ್ರಗತಿ ಪರಿಶೀಲನೆ ಮಾಡಲಾಗುವುದು. ಭೂಸ್ವಾಧೀನ ಇಲಾಖೆ ಅಧಿಕಾರಿಗಳು, ತಹಶೀಲ್ದಾರ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕನಿಷ್ಠ ಮೂರು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನೆ ಮಾಡಬೇಕು ಎಂದು ಸೂಚಿಸಿದರು.</p>.<p>ಸಭೆಯಲ್ಲಿ ಕುಮಟಾಉಪವಿಭಾಗಾಧಿಕಾರಿಪ್ರೀತಿ ಗೆಹ್ಲೋಟ್, ತಹಶೀಲ್ದಾರ್ ಮೇಘರಾಜ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯವಸ್ಥಾಪಕ ನವೀನ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>