‘ಜಿಲ್ಲೆಯಲ್ಲಿ ಪ್ರಮುಖವಾಗಿರುವ ಅರಣ್ಯ ಹಕ್ಕು, ಅರಣ್ಯ ಒತ್ತುವರಿ ಸಮಸ್ಯೆಗಳ ಬಗ್ಗೆ ನಾನು ಅಧ್ಯಯನ ಮಾಡಬೇಕಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಾಗ ಜಾರಿಕೊಳ್ಳುವುದು ನನಗೆ ಇಷ್ಟವಿಲ್ಲ. ಕಂದಾಯ ಇಲಾಖೆ, ಅರಣ್ಯ ಇಲಾಖೆ ತಂಡವಾಗಿ ಕೆಲಸ ಮಾಡಬೇಕು. ಸಮಸ್ಯೆ ನಿವಾರಣೆಯ ಗುರಿಯಿಟ್ಟು ಕೆಲಸ ಮಾಡಬೇಕಿದೆ’ ಎಂದು ಅಭಿಪ್ರಾಯಪಟ್ಟರು.