ಕಾರವಾರ:ಜಿಲ್ಲಾ ಕೇಂದ್ರ, ಅಂಕೋಲಾ, ಸೀಬರ್ಡ್ ನೌಕಾನೆಲೆ ಮತ್ತು ವಿವಿಧ ಗ್ರಾಮ ಪಂಚಾಯ್ತಿಗಳಿಗೆ ಕುಡಿಯುವ ನೀರು ಪೂರೈಕೆಯಾಗುವ ಗಂಗಾವಳಿ ನದಿಯಲ್ಲಿನೀರಿನ ಹರಿವು ಕಡಿಮೆಯಾಗಿದೆ. ಆದ್ದರಿಂದ ನದಿಗೆ ಅಳವಡಿಸಿರುವ ಕೃಷಿ ಪಂಪ್ಸೆಟ್ಗಳ ಬಳಕೆಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಆದೇಶಿಸಿದ್ದಾರೆ.