ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೈಸೂರು ಸರ್ಕಾರ ಇದ್ದ ಕಾಲದಲ್ಲೇ ನಾರಾಯಣಗುರು ನಗರ ನಿವಾಸಿಗಳಿಗೆ ಭೂಮಿ ಹಕ್ಕು ಮಂಜೂರು ಮಾಡಲಾಗಿತ್ತು. ಆದರೆ ಡಿಫಾರೆಸ್ಟ್ ಮಾಡದ ಕಾರಣ ಭೂಮಿ ಹಕ್ಕಿನಿಂದ ಜನರು ವಂಚಿತರಾಗಿದ್ದೇವೆ. ಈ ಸಮಸ್ಯೆ ಬಗೆಹರಲು ಮಾಡಿದ ಮನವಿಗೆ ಈವರೆಗೂ ಜನಪ್ರತಿನಿಧಿಗಳಿಂದ ಸ್ಪಂದನೆ ಸಿಕ್ಕಿಲ್ಲ’ ಎಂದು ಆರೋಪಿಸಿದರು.