ಶಿರಸಿ: ‘ಅತಿವೃಷ್ಟಿಯಿಂದ ಸರ್ಕಾರ ಘೋಷಿಸಿದ ಮಾನದಂಡದ ಅಡಿಯಲ್ಲಿಯೇ, ಅರಣ್ಯ ಅತಿಕ್ರಮಣದಾರರಿಗೂ ನೀಡಬೇಕು. ಅಲ್ಲದೇ, ಕಂದಾಯ ಭೂಮಿ ಹಕ್ಕುದಾರರಿಗೆ ನೀಡುವ ನೀತಿಯನ್ನೇ ಅರಣ್ಯ ಅತಿಕ್ರಮಣದಾರರ ವಾಸ್ತವ್ಯ ಹಾಗೂ ಸಾಗುವಳಿ ಬೆಳೆಗೆ ನಷ್ಟವಾಗಿರುವವರಿಗೂ ಪ್ಯಾಕೇಜ್ ಆಧಾರದ ಮೇಲೆ ಆರ್ಥಿಕ ಸಹಾಯ ನೀಡಬೇಕು’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಒತ್ತಾಯಿಸಿದ್ದಾರೆ.