ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮೂಲಕ ಮುಖ್ಯಮಂತ್ರಿ ಬಳಿ ಈ ಬೇಡಿಕೆಯನ್ನು ಇಡಲಾಗಿದೆ. ಕರಾವಳಿ, ಮಲೆನಾಡು, ಅರೆಮಲೆನಾಡು ಒಳಗೊಂಡ ವಿಶಿಷ್ಟ ಜಿಲ್ಲೆಯಿದೆ. ಇಲ್ಲಿ ಶೇ 75ರಷ್ಟು ಜನರು ಕೃಷಿಯನ್ನೇ ನಂಬಿಕೊಂಡಿದ್ದಾರೆ. ಉಪ ಉದ್ಯೋಗವಾಗಿ ಹೈನುಗಾರಿಕೆ ನಡೆಸುತ್ತಾರೆ. ಪ್ರತಿವರ್ಷ ಹಾಲಿನ ಉತ್ಪಾದನೆ ಹಾಗೂ ಮಾರಾಟದಲ್ಲಿ ಶೇ 18ರಷ್ಟು ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ 250 ಹಾಲು ಉತ್ಪಾದಕ ಸಹಕಾರಿ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿರುವ ಒಟ್ಟು 1200 ಗ್ರಾಮಗಳಲ್ಲಿ ಶೇ 55ರಷ್ಟು ಗ್ರಾಮಗಳನ್ನು ಮಾತ್ರ ಸಂಘಗಳಿವೆ. ಪ್ರತ್ಯೇಕ ಒಕ್ಕೂಟ ರಚನೆಯಾದರೆ, ಪ್ರತಿ ಗ್ರಾಮದಲ್ಲಿ ಹಾಲು ಸಂಘ ಪ್ರಾರಂಭಿಸಿಲು ಸಾಧ್ಯವಿದೆ’ ಎಂದರು.