ಕೋವಿಡ್ ನಿಯಂತ್ರಣ ಕ್ರಮದ ಭಾಗವಾಗಿ ಈ ಬಾರಿಯೂ ಸಾರ್ವಜನಿಕ ಗಣೇಶೋತ್ಸವಗಳಿಗೆ ಸರ್ಕಾರ ಅನುಮತಿ ನಿರಾಕರಿಸಿದೆ. ಅಲ್ಲದೇ ಹೊರಾಂಗಣಗಳಲ್ಲಿ ಗೌರಿ, ಗಣೇಶ ವಿಗ್ರಹಗಳ ಸ್ಥಾಪನೆಯನ್ನೂ ನಿರ್ಬಂಧಿಸಲಾಗಿದೆ. ಆದರೆ, ದೇವಸ್ಥಾನಗಳಲ್ಲಿ ಹಾಗೂ ಮನೆಗಳಲ್ಲಿ ಸರಳವಾಗಿ ಆಚರಿಸುವುದಕ್ಕೆ ಅವಕಾಶವಿದೆ. ವಿಗ್ರಹಗಳನ್ನು ಪ್ರತಿಷ್ಠಾಪನೆಗೆ ತರುವಾಗ ಹಾಗೂಪೂಜಿಸಿದ ಬಳಿಕ ವಿಸರ್ಜನೆಗೆ ತೆಗೆದುಕೊಂಡು ಹೋಗುವಾಗ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮ ನಡೆಸಬಾರದು ಎಂದು ಸರ್ಕಾರ ಸೂಚಿಸಿದೆ.