ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಅನೇಕ ಮಠ, ದೇವಾಲಯಗಳು ಈ ಹಿಂದೆ ತಾವಾಗಿಯೇ ಸ್ವಯಂಪ್ರೇರಿತ ಲಾಕ್ಡೌನ್ ನಿಯಮ ಅನುಸರಿಸಿವೆ. ಆದರೂ, ನಮ್ಮ ಮಠದಲ್ಲಿ ಹಲವು ನಿಯಮಗಳನ್ನು ಅನುಸರಿಸಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮಠದ ಶಿಷ್ಯರಿಂದ ಪಾದಪೂಜೆ, ಭಿಕ್ಷಾ ಸೇವೆಗಳನ್ನು, ಮೊದಲೇ ದೂರವಾಣಿ ಮೂಲಕ ಅನುಮತಿ ಪಡೆದು ಬಂದವರಿಗೆ ದಿನಕ್ಕೆ 10 ಜನರ ಮಿತಿಯಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಈಗ ಎಲ್ಲರ ಸುರಕ್ಷತೆಯ ದೃಷ್ಟಿಯಿಂದ ಸ್ವಯಂಘೋಷಿತವಾಗಿ ಅನಿರ್ದಿಷ್ಟಾವಧಿ ಲಾಕ್ಡೌನ್ ನಿಯಮ ಅನುಸರಿಸಲಾಗುತ್ತಿದೆ. ಅನುಷ್ಠಾನದ ಹೊರತಾಗಿ ಚಾತುರ್ಮಾಸ್ಯದ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗುವುದು’ ಎಂದಿದ್ದಾರೆ.