ವರ್ಷದಿಂದ ವರ್ಷಕ್ಕೆ ಚಕ್ಕಡಿ ಗಾಡಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಭಕ್ತರು ದ್ವಿಚಕ್ರ ವಾಹನಗಳಲ್ಲಿ, ಸರ್ಕಾರಿ ಬಸ್ಗಳಲ್ಲಿ ಹಾಗೂ ಇನ್ನಿತರ ವಾಹನಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಬರುತ್ತಾರೆ. ಜಾತ್ರೆಗೆ ರಾಜ್ಯದ ಧಾರವಾಡ, ಬೆಳಗಾವಿ, ಬಾಗಲಕೋಟೆ, ದಾವಣಗೆರೆ, ಹಾವೇರಿ, ವಿಜಯಪುರ ಜಿಲ್ಲೆ, ನೆರೆಯ ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದಿಂದಲೂ ಸಹಸ್ರಾರು ಭಕ್ತರು ಭೇಟಿ ನೀಡುತ್ತಾರೆ.