ಸುತ್ತಮುತ್ತಲಿನ ಹಳ್ಳಿಯ ಜನರು ಮಧ್ಯರಾತ್ರಿಯಿಂದಲೇ ಮಹಾಗಣಪತಿ ಮತ್ತು ಮಹಾಬಲೇಶ್ವರನ ಪೂಜೆಗಾಗಿ ಸಾಲಿನಲ್ಲಿ ನಿಂತಿದ್ದರು. ಬೆಳಗಿನ ಜಾವ ಪೂಜೆ ಅರ್ಪಿಸಿದರು. ಭಕ್ತರು ರಾಮತೀರ್ಥ, ಕೋಟಿತೀರ್ಥ ಮತ್ತು ಸಮುದ್ರದಲ್ಲಿ ಸ್ನಾನ ಮಾಡಿ ದೇವರ ದರ್ಶನ ಮಾಡಿದರು. ರಾಜ್ಯದಿಂದ, ಮಹಾರಾಷ್ಟ್ರ ಮತ್ತು ಗೋವಾದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಭಕ್ತರ ಸಂಖ್ಯೆ ತುಂಬಾಕಡಿಮೆಯಿತ್ತು. ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ಕೋನರೆಡ್ಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು.