ರಂಜನ್ ಇಂಡೇನ್ ಏಜೆನ್ಸಿ ಸಹಯೋಗದಲ್ಲಿ ಬೆಳಿಗ್ಗೆ 4ರ ಸುಮಾರಿಗೆ ಪಟ್ಟಣದ ಚೋಳೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಆರಂಭಿಸಲಾಯಿತು. ಶಿವನಾಮ ಸ್ಮರಣೆ, ಶಿವಸ್ತುತಿಯೊಂದಿಗೆ ಬರಿಗಾಲಿನಲ್ಲಿ ನಡೆದುಕೊಂಡು ಹೋದರು. ಯಾತ್ರೆಯ ಕೊನೆಯಲ್ಲಿ ತ್ರಿವರ್ಣ ಧ್ವಜ ಹಿಡಿದು ಪುಲ್ವಾಮದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು.