ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಧನ್ಯ

Last Updated 10 ಜುಲೈ 2022, 12:39 IST
ಅಕ್ಷರ ಗಾತ್ರ

ಶಿರಸಿ: ಕೇವಲ ಏಳು ಹಲಸಿನ ಎಲೆಗಳನ್ನು ಬಳಸಿ ಹಿಂದಿ ಅಕ್ಷರದಲ್ಲಿ ರಾಷ್ಟ್ರಗೀತೆ ಬರೆಯುವ ಮೂಲಕ ಸಿದ್ದಾಪುರ ತಾಲ್ಲೂಕಿನ ಗುಡ್ಡೆಶಿರಗೋಡ ಗ್ರಾಮದ ಧನ್ಯ ಹೆಗಡೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ್ದಾರೆ.

ಕಳೆದ ಕೆಲ ತಿಂಗಳಿನಿಂದ ಈಕೆ ಹಲಸಿನ ಎಲೆಗಳ ಮೇಲೆ ರಾಷ್ಟ್ರಗೀತೆ ಬರೆಯುವ ಪ್ರಯತ್ನ ನಡೆಸಿದ್ದಳು. ಸತತ ಪ್ರಯತ್ನದ ಫಲವಾಗಿ ಮೇ ತಿಂಗಳಿನಲ್ಲಿ ಕೇವಲ ಏಳು ಎಲೆಗಳಲ್ಲೇ ಗುರಿ ಸಾಧಿಸಿದ್ದಾಳೆ. ಜೂ.4 ರಂದು ಈಕೆಯ ಸಾಧನೆಯನ್ನು ಪುರಸ್ಕರಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ ಹೆಸರು ದಾಖಲು ಮಾಡಲಾಗಿದೆ.

ಧನ್ಯ ಕೃಷ್ಣಮೂರ್ತಿ ಹೆಗಡೆ ಮತ್ತು ಸವಿತಾ ಹೆಗಡೆ ದಂಪತಿಯ ಪುತ್ರಿಯಾಗಿದ್ದು, ಪ್ರಸ್ತುತ ಸರಕುಳಿಯ ಜಗದಂಬಾ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT