ಮಂಗಳೂರು ಸಮೀಪದ ಕಾರ್ನಾಡ್ ನಿವಾಸಿ ಶಮೀಲಾ ಶೆಟ್ಟಿ ದೂರು ನೀಡಿದವರು. ಅವರು ಅ.7ರಂದು ‘ಮತ್ಸ್ಯಗಂಧ ಎಕ್ಸ್ಪ್ರೆಸ್’ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿಮಂಗಳೂರಿಗೆ ಪ್ರಯಾಣಿಸುತ್ತಿದ್ದರು.ತಮ್ಮ ಹ್ಯಾಂಡ್ ಬ್ಯಾಗ್ನಲ್ಲಿ ಚಿನ್ನಾಭರಣಗಳು, ಎಟಿಎಂ ಕಾರ್ಡ್, ಎರಡು ಮೊಬೈಲ್ ಫೋನ್ಗಳು ಹಾಗೂ ₹ 5 ಸಾವಿರ ನಗದು ಇತ್ತು. ಅದನ್ನು ಮಡಗಾಂನಿಂದ ಗೋಕರ್ಣ ಮಾರ್ಗ ಮಧ್ಯದಲ್ಲಿ ಕಳವು ಮಾಡಲಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.