ಪುತ್ತೂರು: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿ ತನ್ನ ಸ್ಟಾರ್ ಪ್ರಚಾರಕ ಎಂದು ಬಿಂಬಿಸುತ್ತಾ ಬಂದಿದ್ದು, ರಾಜ್ಯದಲ್ಲೂ ಅವರನ್ನು ಬಳಸಿ ಕೊಂಡು ಮತ ಪಡೆಯಲು ನಿರ್ಧರಿಸಿತ್ತು. ಆದರೆ ಈಗ ಆದಿತ್ಯನಾಥ್ ಅವರು ಮುಗ್ಗರಿಸಿ ಬಿದ್ದಿದ್ದು, ಬಿಜೆಪಿ ಏಳೋದು ಕಷ್ಟ’ ಎಂದು ಸಚಿವ ಬಿ. ರಮಾನಾಥ ರೈ ಅವರು ಲೇವಡಿ ಮಾಡಿದರು.