‘ಸರ್ಕಾರದ ಎಲ್ಲ ಆರ್ಥಿಕ ಯೋಜನೆಗಳು ರಾಷ್ಟ್ರೀಕೃತ ಬ್ಯಾಂಕುಗಳವರೆಗೆ ಮಾತ್ರ ಅನುಷ್ಠಾನಗೊಳ್ಳುತ್ತಿತ್ತು. ಸಹಕಾರ ಸಂಘಗಳ ಮೂಲಕ ಯಾವುದೇ ಯೋಜನೆ ಅನುಷ್ಠಾನಗೊಳ್ಳುತ್ತಿರಲಿಲ್ಲ. ಅವರಿಗೆ ತಂತ್ರಜ್ಞಾನ ಅಥವಾ ಆರ್ಥಿಕ ಅನುಕೂಲ ಕೂಡ ಇರಲಿಲ್ಲ. ಪ್ರಸ್ತುತ ಸಹಕಾರ ಸಂಘಗಳ ಮೂಲಕ ನಗದುರಹಿತ ವ್ಯವಹಾರ ಮಾಡಲು ಅನುಕೂಲ ಆಗುವ ಆ್ಯಪ್ ಅನ್ನು ರಾಷ್ಟ್ರ ಮಟ್ಟದಲ್ಲಿ ಚಾಲ್ತಿಗೆ ತರಲಾಗುತ್ತಿದೆ. ಅನಕ್ಷರಸ್ಥರೂ ವರ್ಣ ವೈವಿಧ್ಯದ ಸಹಾಯದಿಂದ ಆರ್ಥಿಕ ವ್ಯವಹಾರ ಮಾಡಲು ಅನುಕೂಲ ಆಗುವ ರೀತಿಯಲ್ಲಿ ಆ್ಯಪ್ ಬದಲಾವಣೆ ಮಾಡಲಾಗುತ್ತಿದೆ’ ಎಂದು ಹೇಳಿದರು.