<p><strong>ಶಿರಸಿ</strong>: ತಾಲ್ಲೂಕಿನಾದ್ಯಂತ ವಾಡಿಕೆಗೆ ಮೀರಿ ಮಳೆ ಸುರಿಯುತ್ತಿರುವ ಪರಿಣಾಮ ತೋಟಗಾರಿಕೆ, ಕೃಷಿ ಬೆಳೆಗಳ ಇಳುವರಿ ಮೇಲೆ ಅಡ್ಡ ಪರಿಣಾಮ ಬೀರುವ ಆತಂಕ ಎದುರಾಗಿದೆ.</p>.<p>ಪೂರ್ವಭಾಗ ಬನವಾಸಿ, ಅಜ್ಜರಣಿ, ತಿಗಣಿ, ಕಾಳಂಗಿ, ಹೆಬ್ಬತ್ತಿ, ಬಿಸಲಕೊಪ್ಪ, ಮಳಲಗಾಂವ ಸೇರಿದಂತೆ ಹಲವೆಡೆ ಅಡಿಕೆಗೆ ಕೊಳೆರೋಗ ಬಾಧಿಸಿದೆ. ಅಲ್ಲದೆ ಜೋಳದ ತೆನೆ ಬೆಳವಣಿಗೆಗೂ ಜಿಟಿ ಜಿಟಿ ಮಳೆ ಅಡ್ಡಿಯಾಗಿದೆ. ಇದರಿಂದ ಫಸಲು ಕಳೆದುಕೊಳ್ಳುವ ಆತಂಕದಲ್ಲಿ ರೈತರಿದ್ದಾರೆ.</p>.<p>ಪಶ್ಚಿಮ ಭಾಗದ ಹಲವೆಡೆಯೂ ಅಡಿಕೆಗೆ ಕೊಳೆರೋಗ ಕಾಣಿಸಿಕೊಂಡಿದೆ. ರೋಗ ನಿಯಂತ್ರಣಕ್ಕೆ ಬೋರ್ಡೊ ದ್ರಾವಣ ಸಿಂಪಡಿಸಲು ನಿರಂತರ ಮಳೆ ಅಡ್ಡಿ ಮಾಡಿದೆ. ಇದರಿಂದ ರೋಗ ಉಲ್ಬಣಗೊಳ್ಳುತ್ತಿದ್ದು ನೂರಾರು ಎಕರೆ ತೋಟದಲ್ಲಿ ಅಡಿಕೆ ಮಿಳ್ಳೆಗಳು ಉದುರತೊಡಗಿವೆ.</p>.<p>‘ಅತಿವೃಷ್ಟಿಯಿಂದ ಜೋಳ ಬಿತ್ತನೆಗೆ ವಿಳಂಬವಾಯಿತು. ತೆನೆ ಮೂಡುವ ಸಮಯದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ಜೋಳದ ತೆನೆಗಳ ಬೆಳವಣಿಗೆ ಕುಂಠಿತಗೊಳ್ಳುತ್ತಿದೆ. ಪ್ರತಿ ಎಕರೆಗೆ 30 ಕ್ವಿಂಟಲ್ ಫಸಲು ಬೆಳೆಯುತ್ತಿದ್ದ ಜಾಗದಲ್ಲಿ ಈ ಬಾರಿ 10 ಕ್ವಿಂಟಲ್ ಬೆಳೆ ದೊರೆಯುವುದು ಅನುಮಾನ’ ಎಂದು ರೈತ ರಾಘವೇಂದ್ರ ನಾಯ್ಕ ಕಿರವತ್ತಿ ಹೇಳಿದರು.</p>.<p>‘ಅಡಿಕೆ ಕೊಳೆರೋಗ ಬಾಧಿಸಿದ ಪ್ರದೇಶದಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ರೋಗ ನಿಯಂತ್ರಣಕ್ಕೆ ರೈತರು ಇನ್ನೊಂದು ಸುತ್ತು ಬೋರ್ಡೊ ದ್ರಾವಣ ಅಥವಾ ಮೆಟಲಾಕ್ಸಿಲ್ ಎಂ.ಝಡ್. ದ್ರಾವಣ ಸಿಂಪಡಿಸಲು ಸೂಚಿಸಲಾಗುತ್ತಿದೆ’ ಎಂದು ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್ ಹೆಗಡೆ ತಿಳಿಸಿದರು.</p>.<p><em>ನಿರಂತರ ಮಳೆಯಿಂದ ಅಡಿಕೆ ಬೆಳೆಗೆ ವ್ಯಾಪಕ ಹಾನಿ ಉಂಟಾಗಿದ್ದು ರೈತರಿಗೆ ಸೂಕ್ತ ಪರಿಹಾರ ನೀಡಬೇಕು.</em></p>.<p class="Subhead"><strong>ದ್ಯಾಮಣ್ಣ ದೊಡ್ಮನಿ</strong></p>.<p><strong>ಕಾಳಂಗಿ ಸೇವಾ ಸಹಕಾರ ಸಂಘದ ಅಧ್ಯಕ್ಷ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ತಾಲ್ಲೂಕಿನಾದ್ಯಂತ ವಾಡಿಕೆಗೆ ಮೀರಿ ಮಳೆ ಸುರಿಯುತ್ತಿರುವ ಪರಿಣಾಮ ತೋಟಗಾರಿಕೆ, ಕೃಷಿ ಬೆಳೆಗಳ ಇಳುವರಿ ಮೇಲೆ ಅಡ್ಡ ಪರಿಣಾಮ ಬೀರುವ ಆತಂಕ ಎದುರಾಗಿದೆ.</p>.<p>ಪೂರ್ವಭಾಗ ಬನವಾಸಿ, ಅಜ್ಜರಣಿ, ತಿಗಣಿ, ಕಾಳಂಗಿ, ಹೆಬ್ಬತ್ತಿ, ಬಿಸಲಕೊಪ್ಪ, ಮಳಲಗಾಂವ ಸೇರಿದಂತೆ ಹಲವೆಡೆ ಅಡಿಕೆಗೆ ಕೊಳೆರೋಗ ಬಾಧಿಸಿದೆ. ಅಲ್ಲದೆ ಜೋಳದ ತೆನೆ ಬೆಳವಣಿಗೆಗೂ ಜಿಟಿ ಜಿಟಿ ಮಳೆ ಅಡ್ಡಿಯಾಗಿದೆ. ಇದರಿಂದ ಫಸಲು ಕಳೆದುಕೊಳ್ಳುವ ಆತಂಕದಲ್ಲಿ ರೈತರಿದ್ದಾರೆ.</p>.<p>ಪಶ್ಚಿಮ ಭಾಗದ ಹಲವೆಡೆಯೂ ಅಡಿಕೆಗೆ ಕೊಳೆರೋಗ ಕಾಣಿಸಿಕೊಂಡಿದೆ. ರೋಗ ನಿಯಂತ್ರಣಕ್ಕೆ ಬೋರ್ಡೊ ದ್ರಾವಣ ಸಿಂಪಡಿಸಲು ನಿರಂತರ ಮಳೆ ಅಡ್ಡಿ ಮಾಡಿದೆ. ಇದರಿಂದ ರೋಗ ಉಲ್ಬಣಗೊಳ್ಳುತ್ತಿದ್ದು ನೂರಾರು ಎಕರೆ ತೋಟದಲ್ಲಿ ಅಡಿಕೆ ಮಿಳ್ಳೆಗಳು ಉದುರತೊಡಗಿವೆ.</p>.<p>‘ಅತಿವೃಷ್ಟಿಯಿಂದ ಜೋಳ ಬಿತ್ತನೆಗೆ ವಿಳಂಬವಾಯಿತು. ತೆನೆ ಮೂಡುವ ಸಮಯದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ಜೋಳದ ತೆನೆಗಳ ಬೆಳವಣಿಗೆ ಕುಂಠಿತಗೊಳ್ಳುತ್ತಿದೆ. ಪ್ರತಿ ಎಕರೆಗೆ 30 ಕ್ವಿಂಟಲ್ ಫಸಲು ಬೆಳೆಯುತ್ತಿದ್ದ ಜಾಗದಲ್ಲಿ ಈ ಬಾರಿ 10 ಕ್ವಿಂಟಲ್ ಬೆಳೆ ದೊರೆಯುವುದು ಅನುಮಾನ’ ಎಂದು ರೈತ ರಾಘವೇಂದ್ರ ನಾಯ್ಕ ಕಿರವತ್ತಿ ಹೇಳಿದರು.</p>.<p>‘ಅಡಿಕೆ ಕೊಳೆರೋಗ ಬಾಧಿಸಿದ ಪ್ರದೇಶದಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ರೋಗ ನಿಯಂತ್ರಣಕ್ಕೆ ರೈತರು ಇನ್ನೊಂದು ಸುತ್ತು ಬೋರ್ಡೊ ದ್ರಾವಣ ಅಥವಾ ಮೆಟಲಾಕ್ಸಿಲ್ ಎಂ.ಝಡ್. ದ್ರಾವಣ ಸಿಂಪಡಿಸಲು ಸೂಚಿಸಲಾಗುತ್ತಿದೆ’ ಎಂದು ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್ ಹೆಗಡೆ ತಿಳಿಸಿದರು.</p>.<p><em>ನಿರಂತರ ಮಳೆಯಿಂದ ಅಡಿಕೆ ಬೆಳೆಗೆ ವ್ಯಾಪಕ ಹಾನಿ ಉಂಟಾಗಿದ್ದು ರೈತರಿಗೆ ಸೂಕ್ತ ಪರಿಹಾರ ನೀಡಬೇಕು.</em></p>.<p class="Subhead"><strong>ದ್ಯಾಮಣ್ಣ ದೊಡ್ಮನಿ</strong></p>.<p><strong>ಕಾಳಂಗಿ ಸೇವಾ ಸಹಕಾರ ಸಂಘದ ಅಧ್ಯಕ್ಷ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>