<p><strong>ಕಾರವಾರ:</strong>ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಗಾಗಿ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಜಿಲ್ಲಾಡಳಿತ ಖರೀದಿಸಲಿದೆ. ಇದರಲ್ಲಿ ಒಂದು ಡ್ರೋಣ್ ಕ್ಯಾಮೆರಾ, ವಿಕಿರಣ ಮಾಪನ ಯಂತ್ರ, ಮೋಟಾರ್ ಚಾಲಿತದೋಣಿ ಹಾಗೂ ಇತರ ಅಗತ್ಯ ಸಲಕರಣೆಗಳು ಇರಲಿವೆ.</p>.<p>ಈ ಬಗ್ಗೆ ಬುಧವಾರ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ‘ಸಲಕರಣೆಗಳ ಖರೀದಿಗೆಂದುರಾಜ್ಯ ಸರ್ಕಾರವು ₹ 50 ಲಕ್ಷ ವಿಶೇಷ ಅನುದಾನ ಬಿಡುಗಡೆ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಇದಕ್ಕೆವಿಶೇಷ ಮುತುವರ್ಜಿ ವಹಿಸಿದ್ದಾರೆ. ವಿವಿಧ ರಕ್ಷಣಾ ಸಲಕರಣೆಗಳನ್ನು ಖರೀದಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ’ ಎಂದು ತಿಳಿಸಿದರು.</p>.<p>‘ವಿಪತ್ತು ನಿರ್ವಹಣೆಯ ಸಂದರ್ಭದಲ್ಲಿ ಡ್ರೋಣ್ ಕ್ಯಾಮೆರಾದ ಅಗತ್ಯದ ಬಗ್ಗೆ ಪೊಲೀಸ್ ಇಲಾಖೆಯಿಂದ ಬೇಡಿಕೆ ಇತ್ತು. ಅದಕ್ಕಾಗಿ ಗುಣಮಟ್ಟದ ಚಿತ್ರೀಕರಣ ಮಾಡುವ ಸುಸಜ್ಜಿತ ಡ್ರೋಣ್ ಕ್ಯಾಮೆರಾವನ್ನು₹ 13 ಲಕ್ಷದಲ್ಲಿಖರೀದಿಸಲಾಗುತ್ತಿದೆ. ಅದನ್ನು ಪೊಲೀಸ್ ಇಲಾಖೆಯ ನಿರ್ವಹಣೆಗೆ ನೀಡಲಾಗುವುದು. ನದಿ ಅಥವಾ ನೀರಿನ ಅವಘಡಗಳ ಸಂದರ್ಭದಲ್ಲಿ ಇನ್ಫ್ಲೇಟ್ ಬೋಟ್ (ಗಾಳಿ ತುಂಬಿದ ದೋಣಿ) ಅಗತ್ಯವಿತ್ತು. ಸುಮಾರು ₹ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಅದನ್ನು ಖರೀದಿಸಲಾಗುತ್ತಿದೆ’ಎಂದು ಅವರು ವಿವರಿಸಿದರು.</p>.<p>‘ಕೈಗಾ ಅಣುವಿದ್ಯುತ್ ಸ್ಥಾವರದ ಸುತ್ತಮುತ್ತಲ ಪ್ರದೇಶದಲ್ಲಿ ವಿಕಿರಣಕ್ಕೆ ಸಂಬಂಧಿಸಿದಂತೆ ಕೆಲವು ವದಂತಿಗಳು ಆಗಾಗ ಕೇಳಿಬರುತ್ತವೆ.ಸ್ಥಾವರದ ನಿರ್ವಹಣೆಯಲ್ಲಿ ವಿಕಿರಣ ಸೋರಿಕೆಯಂತಹ ಯಾವುದೇ ಅವಘಡಗಳೂಸಾಧ್ಯವಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ವಿಕಿರಣ ಮಾಪನ ಯಂತ್ರವನ್ನು ಖರೀದಿಸಲಾಗುತ್ತಿದೆ’ಎಂದು ಅವರು ತಿಳಿಸಿದರು.</p>.<p>ಉಳಿದಂತೆಜೀವರಕ್ಷಕಜಾಕೆಟ್ಗಳು, ತುರ್ತು ಚಿಕಿತ್ಸಾ ಕಿಟ್ಗಳು ಸೇರಿದಂತೆ ವಿವಿಧ ರಕ್ಷಣಾ ಸಲಕರಣೆಗಳನ್ನು ಖರೀದಿಸಲಾಗುತ್ತಿದೆ. ಈಗಾಗಲೇಟೆಂಡರ್ ಪ್ರಕ್ರಿಯೆ ಮುಗಿದಿದೆ. ಆ.15ರ ಹೊತ್ತಿಗೆ ಖರೀದಿ ಪ್ರಕ್ರಿಯೆ ಮುಗಿದು ವಿಪತ್ತು ನಿರ್ವಹಣಾ ವಿಭಾಗದಲ್ಲಿ ಸೇರ್ಪಡೆಯಾಗಲಿವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong>ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಗಾಗಿ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಜಿಲ್ಲಾಡಳಿತ ಖರೀದಿಸಲಿದೆ. ಇದರಲ್ಲಿ ಒಂದು ಡ್ರೋಣ್ ಕ್ಯಾಮೆರಾ, ವಿಕಿರಣ ಮಾಪನ ಯಂತ್ರ, ಮೋಟಾರ್ ಚಾಲಿತದೋಣಿ ಹಾಗೂ ಇತರ ಅಗತ್ಯ ಸಲಕರಣೆಗಳು ಇರಲಿವೆ.</p>.<p>ಈ ಬಗ್ಗೆ ಬುಧವಾರ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ‘ಸಲಕರಣೆಗಳ ಖರೀದಿಗೆಂದುರಾಜ್ಯ ಸರ್ಕಾರವು ₹ 50 ಲಕ್ಷ ವಿಶೇಷ ಅನುದಾನ ಬಿಡುಗಡೆ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಇದಕ್ಕೆವಿಶೇಷ ಮುತುವರ್ಜಿ ವಹಿಸಿದ್ದಾರೆ. ವಿವಿಧ ರಕ್ಷಣಾ ಸಲಕರಣೆಗಳನ್ನು ಖರೀದಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ’ ಎಂದು ತಿಳಿಸಿದರು.</p>.<p>‘ವಿಪತ್ತು ನಿರ್ವಹಣೆಯ ಸಂದರ್ಭದಲ್ಲಿ ಡ್ರೋಣ್ ಕ್ಯಾಮೆರಾದ ಅಗತ್ಯದ ಬಗ್ಗೆ ಪೊಲೀಸ್ ಇಲಾಖೆಯಿಂದ ಬೇಡಿಕೆ ಇತ್ತು. ಅದಕ್ಕಾಗಿ ಗುಣಮಟ್ಟದ ಚಿತ್ರೀಕರಣ ಮಾಡುವ ಸುಸಜ್ಜಿತ ಡ್ರೋಣ್ ಕ್ಯಾಮೆರಾವನ್ನು₹ 13 ಲಕ್ಷದಲ್ಲಿಖರೀದಿಸಲಾಗುತ್ತಿದೆ. ಅದನ್ನು ಪೊಲೀಸ್ ಇಲಾಖೆಯ ನಿರ್ವಹಣೆಗೆ ನೀಡಲಾಗುವುದು. ನದಿ ಅಥವಾ ನೀರಿನ ಅವಘಡಗಳ ಸಂದರ್ಭದಲ್ಲಿ ಇನ್ಫ್ಲೇಟ್ ಬೋಟ್ (ಗಾಳಿ ತುಂಬಿದ ದೋಣಿ) ಅಗತ್ಯವಿತ್ತು. ಸುಮಾರು ₹ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಅದನ್ನು ಖರೀದಿಸಲಾಗುತ್ತಿದೆ’ಎಂದು ಅವರು ವಿವರಿಸಿದರು.</p>.<p>‘ಕೈಗಾ ಅಣುವಿದ್ಯುತ್ ಸ್ಥಾವರದ ಸುತ್ತಮುತ್ತಲ ಪ್ರದೇಶದಲ್ಲಿ ವಿಕಿರಣಕ್ಕೆ ಸಂಬಂಧಿಸಿದಂತೆ ಕೆಲವು ವದಂತಿಗಳು ಆಗಾಗ ಕೇಳಿಬರುತ್ತವೆ.ಸ್ಥಾವರದ ನಿರ್ವಹಣೆಯಲ್ಲಿ ವಿಕಿರಣ ಸೋರಿಕೆಯಂತಹ ಯಾವುದೇ ಅವಘಡಗಳೂಸಾಧ್ಯವಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ವಿಕಿರಣ ಮಾಪನ ಯಂತ್ರವನ್ನು ಖರೀದಿಸಲಾಗುತ್ತಿದೆ’ಎಂದು ಅವರು ತಿಳಿಸಿದರು.</p>.<p>ಉಳಿದಂತೆಜೀವರಕ್ಷಕಜಾಕೆಟ್ಗಳು, ತುರ್ತು ಚಿಕಿತ್ಸಾ ಕಿಟ್ಗಳು ಸೇರಿದಂತೆ ವಿವಿಧ ರಕ್ಷಣಾ ಸಲಕರಣೆಗಳನ್ನು ಖರೀದಿಸಲಾಗುತ್ತಿದೆ. ಈಗಾಗಲೇಟೆಂಡರ್ ಪ್ರಕ್ರಿಯೆ ಮುಗಿದಿದೆ. ಆ.15ರ ಹೊತ್ತಿಗೆ ಖರೀದಿ ಪ್ರಕ್ರಿಯೆ ಮುಗಿದು ವಿಪತ್ತು ನಿರ್ವಹಣಾ ವಿಭಾಗದಲ್ಲಿ ಸೇರ್ಪಡೆಯಾಗಲಿವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>