ಮಂಡ್ಯದಲ್ಲಿ ಕಾವೇರಿ, ಹೇಮಾವತಿ ನದಿಗಳು ಹರಿದರೂ ರೈತರ ಆತ್ಮಹತ್ಯೆ ಪ್ರಮಾಣ ಹೆಚ್ಚಾಗಿದೆ. ಅಲ್ಲಿ ಭತ್ತ ಹಾಗೂ ಕಬ್ಬು ಮಾತ್ರ ಬೆಳೆಯುವುದರಿಂದ ರೈತರು ಸಾಲದ ಶೂಲದಲ್ಲಿ ಸಿಲುಕುತ್ತಿದ್ದಾರೆ. ಮಂಡ್ಯ ರೈತರ ಕೃಷಿಯ ಆದಾಯ ಮೊಣಕಾಲುದ್ದ ಇದ್ದರೆ, ಸಾಲ ಎದೆ ಮಟ್ಟದಲ್ಲಿರುತ್ತದೆ ಎಂಬ ಮಾತಿದೆ. ಆದರೆ, ಕೋಲಾರದಲ್ಲಿ ಮಳೆಯೂ ಕಡಿಮೆ, ಅಂತರ್ಜಲ ಮಟ್ಟ ಕುಸಿದಿದ್ದರೂ ಸಮಗ್ರ ಕೃಷಿ ಪದ್ಧತಿ ಅಳವಡಿಕೆಯ ಮೂಲಕ ಅಲ್ಲಿನ ರೈತರು ಹೆಚ್ಚು ಆದಾಯ ಗಳಿಸುತ್ತಿದ್ದಾರೆ.