ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯೋತ್ಸವ ಅಮೃತ ವರ್ಷಾಚರಣೆ ನೈತಿಕತೆ ಬಿಜೆಪಿಗಿಲ್ಲ: ಡಿ.ಆರ್.ಪಾಟೀಲ

Last Updated 29 ಸೆಪ್ಟೆಂಬರ್ 2021, 7:58 IST
ಅಕ್ಷರ ಗಾತ್ರ

ಶಿರಸಿ: ‘ಗಾಂಧೀಜಿ ಕ್ವಿಟ್ ಇಂಡಿಯಾ ಚಳುವಳಿಗೆ ಕರೆ ಕೊಟ್ಟಾಗ ಅದನ್ನು ಬಹಿಷ್ಕರಿಸಿದ್ದ ವೀರ ಸಾವರ್ಕರ್‌ ಅವರನ್ನು ಆರಾಧಿಸುವ ಬಿಜೆಪಿಗೆ ಸ್ವಾತಂತ್ರ್ಯೋತ್ಸವದ ಅಮೃತ ವರ್ಷ ಆಚರಿಸುವ ನೈತಿಕತೆ ಇಲ್ಲ’ ಎಂದು ರಾಜೀವ ಗಾಂಧಿ ಪಂಚಾಯತರಾಜ್ ರಾಷ್ಟ್ರೀಯ ಸಮಿತಿ ಸದಸ್ಯ ಡಿ.ಆರ್.ಪಾಟೀಲ ಆರೋಪಿಸಿದರು.

ಇಲ್ಲಿನ ಅಂಬೇಡ್ಕರ ಭವನದಲ್ಲಿ ಬುಧವಾರ ಸಂಘಟನೆಯ ಜಿಲ್ಲಾಮಟ್ಟದ ಸಮಾವೇಶದಲ್ಲಿ ಅವರು ಮಾತನಾಡದರು.

‘ಬ್ರಿಟೀಷರ ಜತೆ ಕೈಜೋಡಿಸುತ್ತೇನೆ. ಮುಂದೆಂದೂ ಚಳುವಳಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ವೀರ ಸಾವರ್ಕರ್ ಪತ್ರ ಬರೆದುಕೊಟ್ಟ ಮೇಲೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಇದು ನೈಜ ಇತಿಹಾಸ. ಆದರೆ ಬಿಜೆಪಿಗರು ಸುಳ್ಳು ಇತಿಹಾಸ ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಸ್ವಾತಂತ್ರ್ಯೋತ್ಸವದ ಅಮೃತ ವರ್ಷ ಆಚರಿಸುವ ಹಕ್ಕು ಕಾಂಗ್ರೆಸ್ಸಿಗಿದೆ. ಜೆಡಿಎಸ್ ಗೂ ಇರಬಹುದು. ಆದರೆ ನೈತಿಕವಾಗಿ ಬಿಜೆಪಿ ಹಕ್ಕು ಕಳೆದುಕೊಂಡಿದೆ’ ಎಂದರು.

‘ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಇತಿಹಾಸ ಬಿಂಬಿಸುವ ಬಿಜೆಪಿಗರ ಮನಸ್ಥಿತಿಯನ್ನು ಜನರಿಗೆ ಅರ್ಥ ಮಾಡಿಸಬೇಕಿದೆ. ಇಂದಿರಾಗಾಂಧಿ ಯುಗದ ಕಾಂಗ್ರೆಸ್ ಮತ್ತೆ ಆರಂಭವಾಗಬೇಕಿದೆ’ ಎಂದರು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ, ವಿಧಾನ ಪರಿಷತ ಸದಸ್ಯ ವಿಜಯ ಸಿಂಗ್, ವಿನುತಾ ಓರಾ, ವಿ.ವೈ.ಘೋರ್ಪಡೆ, ಭೀಮಣ್ಣ ನಾಯ್ಕ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT