ಜನರ ದೂರು ಆಧರಿಸಿ, ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ, ಪೌರಾಯುಕ್ತ ರಮೇಶ ನಾಯಕ, ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಉಮೇಶ, ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ, ಸಿಪಿಐ ಪ್ರದೀಪ ಬಿ.ಯು, ಮಾರುಕಟ್ಟೆ ಠಾಣೆ ಪಿಎಸ್ಐ ನಾಗಪ್ಪ ಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗುಂಪಾಗಿ ಸೇರಿದ್ದ ಜನರನ್ನು ಚದುರಿಸಿ, ಮನೆಗೆ ಕಳುಹಿಸಿದರು.