ಮಳೆಗಾಲ ಆರಂಭವಾಗುವ ಮೊದಲೇಚರಂಡಿಯ ಮಣ್ಣನ್ನು ಸರಿಯಾಗಿ ಮುಚ್ಚದಿದ್ದರೆ ಮಳೆ ನೀರು ರಸ್ತೆಯಲ್ಲೇ ಹರಿದು ಬರಲಿದೆ. ಇದರಿಂದ ಉತ್ತಮವಾದ ರಸ್ತೆಯಲ್ಲಿ ಹೊಂಡ ಬಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ. ಈ ರಸ್ತೆಯಲ್ಲಿ ನಿತ್ಯವೂ ನೂರಾರು ವಾಹನಗಳು ಸಂಚರಿಸುತ್ತವೆ. ಕೈಗಾ ಅಣುವಿದ್ಯುತ್ ಸ್ಥಾವರ, ಕದ್ರಾ ಅಣೆಕಟ್ಟೆಯ ಭಾಗಕ್ಕೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆಇದು ಪ್ರಮುಖ ರಸ್ತೆಯಾಗಿದೆ.