ಸರಿಯಾದ ಸಮಯಕ್ಕೆ ಸ್ಥಳದಲ್ಲಿ ಹಾಜರಿದ್ದು, ಲಸಿಕಾ ಕಾರ್ಯದ ತಾಲೀಮು ಯಶಸ್ವಿಯಾಗಲು ಕ್ರಮ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಾಧಕ–ಬಾಧಕಗಳ ಬಗ್ಗೆ ಸ್ಪಷ್ಟವಾದ ಅಭಿಪ್ರಾಯಗಳನ್ನು ಮತ್ತು ಸಲಹೆಗಳನ್ನು ಲಿಖಿತವಾಗಿ ಬರೆದು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು. ತಾಲೀಮಿನ ಸಂದರ್ಭದಲ್ಲಿ ಯಾವುದಾದರೂ ಲೋಪದೋಷಗಳು ಕಂಡುಬಂದರೆ, ಲಸಿಕಾ ಕಾರ್ಯಕ್ರಮದ ಸಂದರ್ಭದಲ್ಲಿ ಅವುಗಳನ್ನು ಸರಿಪಡಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ವರದಿ ಕೊಡಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ಸೂಚಿಸಿದ್ದಾರೆ.