ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿಗೆ ಬೆಂಕಿ ಹಚ್ಚಿದ ಪತಿಯಿಂದ ಆತ್ಮಹತ್ಯೆ ಯತ್ನ

Last Updated 9 ಸೆಪ್ಟೆಂಬರ್ 2022, 16:25 IST
ಅಕ್ಷರ ಗಾತ್ರ

ಸಿದ್ದಾಪುರ: ತಾಲ್ಲೂಕಿನ ಕಾನಗೋಡ ಗ್ರಾಮದಲ್ಲಿ ಶುಕ್ರವಾರ, ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಳಿಕ ತಾನು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ತೀವ್ರ ಸ್ವರೂಪದಿಂದ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾನಗೋಡ ಗ್ರಾಮದ ಗಣೇಶ ನಗರ ನಿವಾಸಿ ಗುತ್ಯ ಸಣ್ಯಾ ಚೆನ್ನಯ್ಯ (50) ಎಂಬಾತ ಆರೋಪಿಯಾಗಿದ್ದಾನೆ. ಶುಕ್ರವಾರ ಮಧ್ಯಾಹ್ನ ವಿಪರೀತ ಮದ್ಯ ಕುಡಿದು ಮನೆಗೆ ಬಂದು ಹೆಂಡತಿ ರೇಣುಕಾ ಗುತ್ಯ ಚನ್ನಯ್ಯ (45) ಜೊತೆ ಜಗಳ ಮಾಡಿದ್ದ. ಬಳಿಕ ಕೃತ್ಯ ಎಸಗಿದ್ದಾನೆ.

ವಿಷಯ ತಿಳಿದ ಸ್ಥಳೀಯರು ‘108’ ಆಂಬುಲೆನ್ಸ್‌ಗೆ ಕರೆ ಮಾಡಿ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪತ್ನಿಯನ್ನು ಆಸ್ಪತ್ರೆಗೆ ಒಯ್ಯುತ್ತಿದ್ದಂತೆ ಗುತ್ಯ ಕೂಡ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದಾನೆ. ಸ್ಥಳೀಯರು ಆತನನ್ನೂ ಖಾಸಗಿ ವಾಹನದ ಮೂಲಕ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT