ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿವೈಎಸ್ಪಿ ಶಂಕರ ಮಾರಿಹಾಳಗೆ ರಾಷ್ಟ್ರಪತಿ ಪದಕ

Last Updated 24 ಜೂನ್ 2019, 15:31 IST
ಅಕ್ಷರ ಗಾತ್ರ

ಕಾರವಾರ: ಡಿವೈಎಸ್ಪಿ ಶಂಕರ ಮಾರಿಹಾಳ ಅವರು ಈ ಬಾರಿಯ ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.ಜುಲೈ 7ರಂದುಬೆಳಿಗ್ಗೆ11ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಪದಕ ಸ್ವೀಕರಿಸಲಿದ್ದಾರೆ.

1994ರಲ್ಲಿ ಪಿಎಸ್‍ಐ ಆಗಿ ವೃತ್ತಿ ಜೀವನ ಆರಂಭಿಸಿದ ಅವರು, ಮೈಸೂರಿನಲ್ಲಿ ಪ್ರೊಬೆಷನರಿ ಅವಧಿ ಪೂರ್ಣಗೊಳಿಸಿದರು. ನಂತರ ಚಿತ್ರದುರ್ಗ, ದಾವಣಗೆರೆಯಲ್ಲಿ ಹುದ್ದೆ ನಿಭಾಯಿಸಿದರು. ಬಳಿಕ ಸಿಪಿಐ ಆಗಿಬಡ್ತಿ ಪಡೆದುಬಳ್ಳಾರಿ, ಬೆಳಗಾವಿ, ಕಲಬುರ್ಗಿ, ಚಿತ್ರದುರ್ಗದಲ್ಲಿ ಕರ್ತವ್ಯ ನಿರ್ವಹಿಸಿದರು.

2015ರಲ್ಲಿ ಡಿಎಸ್‍ಪಿಯಾಗಿ ಪದೋನ್ನತ ಹೊಂದಿದ ಅವರು, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭದ್ರತಾ ಅಧಿಕಾರಿಯಾಗಿದ್ದರು. ಬಳಿಕ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸಿ ಪ್ರಸ್ತುತ ಕಾರವಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು 2001ರಲ್ಲಿ ಮುಖ್ಯಮಂತ್ರಿ ಪದಕಕ್ಕೂಭಾಜನರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT