<p><strong>ಶಿರಸಿ:</strong> ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಅವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯವನ್ನು ಮೀರುವ ಉಪಾಯಗಳನ್ನು ಕುರಿತು ಮಾಡಿದ ಪಾಠವನ್ನು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಕ್ಕಳ ಸಾಲಿನಲ್ಲಿ ಕುಳಿತು ಕೇಳಿದರು.</p>.<p>ಮಕ್ಕಳ ಸಾಲಿನ ಮುಂದಿನ ಬೇಂಚ್ನಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಕುಳಿತಿದ್ದರೆ, ಕರಿ ಹಲಗೆಯ ಎದುರು ನಿಂತು ಸಚಿವ ಸುರೇಶಕುಮಾರ್ ಮಕ್ಕಳೊಂದಿಗೆ ಸಂವಾದ ನಡೆಸಿದರು. ಮಕ್ಕಳು ಪ್ರಶ್ನೆಗೆ ಸರಿಯುತ್ತರ ನೀಡಿದ್ದನ್ನು ಶ್ಲಾಘಿಸಿದರು.</p>.<p>‘ಪರೀಕ್ಷೆಗೆ ಇನ್ನು ಕೆಲವೇ ದಿನಗಳಿವೆ. ಈ ದಿನಗಳನ್ನು ತಪಸ್ಸಿನಂತೆ ಕಳೆಯಬೇಕು. ಗೊಂದಲಗಳನ್ನು ನಿವಾರಿಸಿಕೊಂಡು ವಿಷಯಾಧಾರಿತವಾಗಿ ಅಭ್ಯಾಸ ಮಾಡಬೇಕು. ಪರೀಕ್ಷೆ ಮುಗಿಯುವ ತನಕ ಟಿ.ವಿ, ಮೊಬೈಲ್ ಬಳಕೆಯಿಂದ ದೂರವಿದ್ದರೆ ಜ್ಞಾಪಕ ಶಕ್ತಿಯೂ ಹೆಚ್ಚುತ್ತದೆ’ ಎಂದು ಸಚಿವರು ಕಿವಿಮಾತು ಹೇಳಿದರು.</p>.<p>‘ಪರೀಕ್ಷೆಯೆಂದರೆ ಯುದ್ಧವಲ್ಲ. ಅದೊಂದು ಆಟದ ಬಯಲಿದ್ದಂತೆ. ಉತ್ತಮ ಫಲಿತಾಂಶ ಪಡೆಯಲಷ್ಟೇ ಶಿಕ್ಷಣ ಸೀಮಿತವಾಗಿಲ್ಲ. ಗುಣಮಟ್ಟದ ಜ್ಞಾನ ಮಕ್ಕಳಿಗೆ ಸಿಗಬೇಕು. ಈ ನಿಟ್ಟಿನಲ್ಲಿ ಸಾಕಷ್ಟು ಹೊಸ ಪ್ರಯೋಗಗಳನ್ನು ಶಾಲಾ ಹಂತದಲ್ಲಿ ಮಾಡಲಾಗುತ್ತಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಅವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯವನ್ನು ಮೀರುವ ಉಪಾಯಗಳನ್ನು ಕುರಿತು ಮಾಡಿದ ಪಾಠವನ್ನು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಕ್ಕಳ ಸಾಲಿನಲ್ಲಿ ಕುಳಿತು ಕೇಳಿದರು.</p>.<p>ಮಕ್ಕಳ ಸಾಲಿನ ಮುಂದಿನ ಬೇಂಚ್ನಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಕುಳಿತಿದ್ದರೆ, ಕರಿ ಹಲಗೆಯ ಎದುರು ನಿಂತು ಸಚಿವ ಸುರೇಶಕುಮಾರ್ ಮಕ್ಕಳೊಂದಿಗೆ ಸಂವಾದ ನಡೆಸಿದರು. ಮಕ್ಕಳು ಪ್ರಶ್ನೆಗೆ ಸರಿಯುತ್ತರ ನೀಡಿದ್ದನ್ನು ಶ್ಲಾಘಿಸಿದರು.</p>.<p>‘ಪರೀಕ್ಷೆಗೆ ಇನ್ನು ಕೆಲವೇ ದಿನಗಳಿವೆ. ಈ ದಿನಗಳನ್ನು ತಪಸ್ಸಿನಂತೆ ಕಳೆಯಬೇಕು. ಗೊಂದಲಗಳನ್ನು ನಿವಾರಿಸಿಕೊಂಡು ವಿಷಯಾಧಾರಿತವಾಗಿ ಅಭ್ಯಾಸ ಮಾಡಬೇಕು. ಪರೀಕ್ಷೆ ಮುಗಿಯುವ ತನಕ ಟಿ.ವಿ, ಮೊಬೈಲ್ ಬಳಕೆಯಿಂದ ದೂರವಿದ್ದರೆ ಜ್ಞಾಪಕ ಶಕ್ತಿಯೂ ಹೆಚ್ಚುತ್ತದೆ’ ಎಂದು ಸಚಿವರು ಕಿವಿಮಾತು ಹೇಳಿದರು.</p>.<p>‘ಪರೀಕ್ಷೆಯೆಂದರೆ ಯುದ್ಧವಲ್ಲ. ಅದೊಂದು ಆಟದ ಬಯಲಿದ್ದಂತೆ. ಉತ್ತಮ ಫಲಿತಾಂಶ ಪಡೆಯಲಷ್ಟೇ ಶಿಕ್ಷಣ ಸೀಮಿತವಾಗಿಲ್ಲ. ಗುಣಮಟ್ಟದ ಜ್ಞಾನ ಮಕ್ಕಳಿಗೆ ಸಿಗಬೇಕು. ಈ ನಿಟ್ಟಿನಲ್ಲಿ ಸಾಕಷ್ಟು ಹೊಸ ಪ್ರಯೋಗಗಳನ್ನು ಶಾಲಾ ಹಂತದಲ್ಲಿ ಮಾಡಲಾಗುತ್ತಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>